Honor to PM Narendra Modi if he shows a spotless BJP: CM Siddaramaiah

ಕಳಂಕ ರಹಿತ ಬಿಜೆಪಿಗನ ತೋರಿಸಿದರೆ PM Narendra Modiಗೆ ಸನ್ಮಾನ: CM Siddaramaiah

ಕಳಂಕ ರಹಿತ ಬಿಜೆಪಿಗನ ತೋರಿಸಿದರೆ PM Narendra Modiಗೆ ಸನ್ಮಾನ: CM Siddaramaiah

ಬೆಂಗಳೂರು; ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪಂಥಾಹ್ವಾನ ನೀಡಿದ್ದಾರೆ

ಈ ಕುರಿತು ಪ್ರಕಟಣೆ ನೀಡಿರುವ ಸಿಎಂ ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ ಎಂದು ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ?

ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ.

ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ?

ಪ್ರಧಾನಿ ನರೇಂದ್ರ ಮೋದಿ ಅವರೇ,
ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?

ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ.

ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಬಹಿರಂಗ ಸವಾಲೆಸೆದಿದ್ದಾರೆ.

ಇದನ್ನೂ ಓದಿ: Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು