liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು.

ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ ಮದ್ಯವೊಂದಕ್ಕೆ ಜನ ಫಿದಾ ಆಗಿದ್ದಾರೆ. ಅದು ಯಾವುದು ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ನಿರಂತರವಾಗಿ ಮದ್ಯ ಮತ್ತು ಬಿಯರ್ ಬೆಲೆ ಸಹ ಹೆಚ್ಚಾಗುತ್ತಲ್ಲೇ ಇದೆ. ಕರ್ನಾಟಕ ಸರ್ಕಾರವು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿದಾಗ, ಮದ್ಯ ಕಂಪನಿಗಳು ಹಾಗೂ ಮದ್ಯ ಪ್ರಿಯರಿಂದಲೂ ವಿರೋಧ ವ್ಯಕ್ತವಾಗುತ್ತಿತ್ತು. ಅಲ್ಲದೇ ಮದ್ಯದ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುವುದರಿಂದ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ. ಮದ್ಯದ ಬೆಲೆ ಹೆಚ್ಚಳದ ನಡುವೆಯೂ ವಿಸ್ಕಿ ಭರ್ಜರಿ ಮಾರಾಟವಾಗಿದ್ದು, ವಿಸ್ಕಿ ಮಾರಾಟದಲ್ಲಿ ಕರ್ನಾಟಕವು ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿಯೇ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಹೊಸ ದಾಖಲೆಯಾಗಿದೆ. ಇನ್ನು ಇದರಲ್ಲಿ ಶೇ.58ರಷ್ಟು ವಿಸ್ಕಿ ಮಾರಾಟವು ದಕ್ಷಿಣ ಭಾರತದ ಭಾಗದಲ್ಲೇ ಆಗಿದೆ. ಅಲ್ಲದೇ ಇದರಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ಹೇಳಲಾಗಿದೆ. ಸಿಐಎಬಿಸಿ (ಭಾರತೀಯ ಮದ್ಯ ಮಾರಾಟಗಾರರ ಒಕ್ಕೂಟ) ಅಂಕಿ-ಅಂಶವು ಈ ವಿಷಯವನ್ನು ಬಹಿರಂಗಪಡಿಸಿದೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಬಿಯರ್ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿಸ್ಕಿಗೂ ಬೇಡಿಕೆ ಹೆಚ್ಚಾಗಿದೆ. ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್ ವಿಸ್ಕಿ, ರಮ್, ಜಿನ್‌, ವೋಡ್ಕಾ, ಬ್ರಾಂಡಿ ಸೇರಿದಂತೆ ವಿವಿಧ ಮದ್ಯಗಳ ಮಾರಾಟದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಅಲ್ಲದೇ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ. ಮಾರ್ಚ್‌ 31ರ ಆರ್ಥಿಕ ವರ್ಷದಲ್ಲಿ ಅಂತ್ಯದ ವೇಳೆಗೆ ಈ ರಾಜ್ಯಗಳಲ್ಲಿ 23.18 ಕೋಟಿ ಬಾಕ್ಸ್ ವಿಸ್ಕಿ ಮಾರಾಟವಾಗಿದೆ. ಇನ್ನು ದೇಶದ ಉಳಿದ ರಾಜ್ಯಗಳು ಒಟ್ಟಾರೆ ಶೇ.42ರಷ್ಟು ಪಾಲು ಮಾರಾಟವಾಗಿದೆ ಎಂದು ಅಂಕಿ – ಅಂಶವು ಉಲ್ಲೇಖ ಮಾಡಿದೆ.

ದಕ್ಷಿಣದಲ್ಲೇ ಹೆಚ್ಚು:
ಇನ್ನು ವಿಸ್ಕಿ ಮಾರಾಟದಲ್ಲಿ ಕರ್ನಾಟಕವೇ ಪ್ರಥಮ ಸ್ಥಾನದಲ್ಲಿದ್ದಾರೆ. ದಕ್ಷಿಣ ಭಾರತದ ಐದು ರಾಜ್ಯಗಳು ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ 6.88 ಕೋಟಿ ಕೇಸ್‌(ಬಾಕ್ಸ್‌)ಗಳು ಮಾರಾಟವಾಗುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದಾದ ನಂತರದಲ್ಲಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ಸ್ಥಾನ ಪಡೆದಿವೆ. ಇನ್ನು ಮೊದಲ ಆರು ಸ್ಥಾನಗಳಲ್ಲಿ ದಕ್ಷಿಣ ಭಾರತದ ಪ್ರದೇಶಗಳೇ ಇವೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ