liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು.

ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ ಮದ್ಯವೊಂದಕ್ಕೆ ಜನ ಫಿದಾ ಆಗಿದ್ದಾರೆ. ಅದು ಯಾವುದು ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ನಿರಂತರವಾಗಿ ಮದ್ಯ ಮತ್ತು ಬಿಯರ್ ಬೆಲೆ ಸಹ ಹೆಚ್ಚಾಗುತ್ತಲ್ಲೇ ಇದೆ. ಕರ್ನಾಟಕ ಸರ್ಕಾರವು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿದಾಗ, ಮದ್ಯ ಕಂಪನಿಗಳು ಹಾಗೂ ಮದ್ಯ ಪ್ರಿಯರಿಂದಲೂ ವಿರೋಧ ವ್ಯಕ್ತವಾಗುತ್ತಿತ್ತು. ಅಲ್ಲದೇ ಮದ್ಯದ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುವುದರಿಂದ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ. ಮದ್ಯದ ಬೆಲೆ ಹೆಚ್ಚಳದ ನಡುವೆಯೂ ವಿಸ್ಕಿ ಭರ್ಜರಿ ಮಾರಾಟವಾಗಿದ್ದು, ವಿಸ್ಕಿ ಮಾರಾಟದಲ್ಲಿ ಕರ್ನಾಟಕವು ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ದೇಶದಲ್ಲಿಯೇ ಒಟ್ಟು 40.17 ಕೋಟಿ ಕೇಸ್‌ನಷ್ಟು ವಿಸ್ಕಿ ಮಾರಾಟವಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಹೊಸ ದಾಖಲೆಯಾಗಿದೆ. ಇನ್ನು ಇದರಲ್ಲಿ ಶೇ.58ರಷ್ಟು ವಿಸ್ಕಿ ಮಾರಾಟವು ದಕ್ಷಿಣ ಭಾರತದ ಭಾಗದಲ್ಲೇ ಆಗಿದೆ. ಅಲ್ಲದೇ ಇದರಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ ಎಂದು ಹೇಳಲಾಗಿದೆ. ಸಿಐಎಬಿಸಿ (ಭಾರತೀಯ ಮದ್ಯ ಮಾರಾಟಗಾರರ ಒಕ್ಕೂಟ) ಅಂಕಿ-ಅಂಶವು ಈ ವಿಷಯವನ್ನು ಬಹಿರಂಗಪಡಿಸಿದೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಬಿಯರ್ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿಸ್ಕಿಗೂ ಬೇಡಿಕೆ ಹೆಚ್ಚಾಗಿದೆ. ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್ ವಿಸ್ಕಿ, ರಮ್, ಜಿನ್‌, ವೋಡ್ಕಾ, ಬ್ರಾಂಡಿ ಸೇರಿದಂತೆ ವಿವಿಧ ಮದ್ಯಗಳ ಮಾರಾಟದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಅಲ್ಲದೇ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ. ಮಾರ್ಚ್‌ 31ರ ಆರ್ಥಿಕ ವರ್ಷದಲ್ಲಿ ಅಂತ್ಯದ ವೇಳೆಗೆ ಈ ರಾಜ್ಯಗಳಲ್ಲಿ 23.18 ಕೋಟಿ ಬಾಕ್ಸ್ ವಿಸ್ಕಿ ಮಾರಾಟವಾಗಿದೆ. ಇನ್ನು ದೇಶದ ಉಳಿದ ರಾಜ್ಯಗಳು ಒಟ್ಟಾರೆ ಶೇ.42ರಷ್ಟು ಪಾಲು ಮಾರಾಟವಾಗಿದೆ ಎಂದು ಅಂಕಿ – ಅಂಶವು ಉಲ್ಲೇಖ ಮಾಡಿದೆ.

ದಕ್ಷಿಣದಲ್ಲೇ ಹೆಚ್ಚು:
ಇನ್ನು ವಿಸ್ಕಿ ಮಾರಾಟದಲ್ಲಿ ಕರ್ನಾಟಕವೇ ಪ್ರಥಮ ಸ್ಥಾನದಲ್ಲಿದ್ದಾರೆ. ದಕ್ಷಿಣ ಭಾರತದ ಐದು ರಾಜ್ಯಗಳು ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ 6.88 ಕೋಟಿ ಕೇಸ್‌(ಬಾಕ್ಸ್‌)ಗಳು ಮಾರಾಟವಾಗುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದಾದ ನಂತರದಲ್ಲಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ಸ್ಥಾನ ಪಡೆದಿವೆ. ಇನ್ನು ಮೊದಲ ಆರು ಸ್ಥಾನಗಳಲ್ಲಿ ದಕ್ಷಿಣ ಭಾರತದ ಪ್ರದೇಶಗಳೇ ಇವೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ