ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ನರ್ಸರಿಯಿಂದ ನೌಕರಿಯವರೆಗೆ ಕಲ್ಪನೆಯಡಿ ದೇಶದ ಪ್ರಮುಖ ಯಂತ್ರೋಪಕರಣ ತಯಾರಿಕೆ ಘಟಕಗಳಾದ ಟಾಟಾ,ಐಫೊನ್ ಫಾಕ್ಸಕಾನ್,ಮಹೀಂದ್ರಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುತ್ತಿದ್ದು ಅಭ್ಯರ್ಥಿಗಳಿಗೆ ನೇರಸಂದರ್ಶನ ಇರಲಿದೆ.ಪುರುಷ ಹಾಗೂ ಮಹಿಳೆಯರಿಗೆ ಉದ್ಯೋಗವಕಾಶಕ್ಕೆ ಆದ್ಯತೆ ಇದೆ.ಎಸ್.ಎಸ್.ಎಲ್.ಸಿ,ಪಿಯುಸಿ,ಐಟಿಐ.ಡಿಪ್ಲೋಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾಗಿರಲಿ,ಅನುತ್ತೀರ್ಣರಾಗಿದ್ದರೂ ಉದ್ಯೋಗ ನೀಡಲಾಗುತ್ತದೆ.ಬೆಂಗಳೂರು,ಕೋಲಾರ ಹಾಗೂ ದೊಡ್ಡಬಳ್ಳಾಪೂರದಲ್ಲಿ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಸುಮಂಗಲಾ ಎಸ್.ಬಿರಾದಾರ ಮಾತನಾಡಿ, ಮೇ.3 ರಂದು ಬೆಳಗ್ಗೆ 10ಗಂಟೆಯಿoದ ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರನ್ಯಾಶನಲ್ ಶಾಲೆಯ ಆವರಣದಲ್ಲಿ ಈ ಉದ್ಯೋಗಮೇಳ ನಡೆಯಲಿದೆ ಎಂದು ತಿಳಿಸಿದರು. ಮೇಲ್ವಿಚಾರಕ ಸತೀಶ ವಾಲೀಕಾರ, ಪ್ರಾಚಾರ್ಯ ಅಶೋಕ ತುಪ್ಪದ, ಆಯ್ಕೆಯಾದವರಿಗೆ ಆಕರ್ಷಕ ವೇತನ,ಒವರ್‌ಟೈಮ್ ಪ್ರೋತ್ಸಾಹಧನ,ಉದ್ಯೋಗಭದ್ರತೆ ,ಉಚಿತ ಊಟ ವಸತಿ,ಇಎಸ್‌ಐ,ಪಿಎಫ್ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.ಹೆಚ್ಚಿನ ಮಾಹಿತಿಗಾಗಿ ಮೊ.9108445003,9187229281,9108445005 ಸಂಪರ್ಕಿಸಬಹುದಾಗಿದೆ.

ಬಿಎಎಸ್ ಸ್ಕೂಲ್‌ಗೆ ಸಿಬಿಎಸ್‌ಇ ಮಾನ್ಯತೆ: ಸ್ಟೇಟ್ ಸಿಲೆಬಸ್‌ನಿಂದ ಸಿಬಿಎಸ್‌ಇ ಬೋರ್ಡ್ನ ಮಾನ್ಯತೆ ಬಿಎಎಸ್ ಶಾಲೆಗೆ ದೊರಕಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ, ಕಾರ್ಯದರ್ಶಿ ಸುಮಂಗಲಾ ಶಿವನಗೌಡ ಬಿರಾದಾರ ಹೇಳಿದರು.ಶಾಲೆ ಸಂಕೇತ ಸಂಖ್ಯೆ 47447 ಇದ್ದು ಸಿಬಿಎಸ್‌ಇ ಬೋರ್ಡ್ನ ಮಾನ್ಯತೆ ಸಂಖ್ಯೆ 831763 ಇದೆ ಎಂದು ತಿಳಿಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ