ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ನರ್ಸರಿಯಿಂದ ನೌಕರಿಯವರೆಗೆ ಕಲ್ಪನೆಯಡಿ ದೇಶದ ಪ್ರಮುಖ ಯಂತ್ರೋಪಕರಣ ತಯಾರಿಕೆ ಘಟಕಗಳಾದ ಟಾಟಾ,ಐಫೊನ್ ಫಾಕ್ಸಕಾನ್,ಮಹೀಂದ್ರಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುತ್ತಿದ್ದು ಅಭ್ಯರ್ಥಿಗಳಿಗೆ ನೇರಸಂದರ್ಶನ ಇರಲಿದೆ.ಪುರುಷ ಹಾಗೂ ಮಹಿಳೆಯರಿಗೆ ಉದ್ಯೋಗವಕಾಶಕ್ಕೆ ಆದ್ಯತೆ ಇದೆ.ಎಸ್.ಎಸ್.ಎಲ್.ಸಿ,ಪಿಯುಸಿ,ಐಟಿಐ.ಡಿಪ್ಲೋಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾಗಿರಲಿ,ಅನುತ್ತೀರ್ಣರಾಗಿದ್ದರೂ ಉದ್ಯೋಗ ನೀಡಲಾಗುತ್ತದೆ.ಬೆಂಗಳೂರು,ಕೋಲಾರ ಹಾಗೂ ದೊಡ್ಡಬಳ್ಳಾಪೂರದಲ್ಲಿ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಸುಮಂಗಲಾ ಎಸ್.ಬಿರಾದಾರ ಮಾತನಾಡಿ, ಮೇ.3 ರಂದು ಬೆಳಗ್ಗೆ 10ಗಂಟೆಯಿoದ ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರನ್ಯಾಶನಲ್ ಶಾಲೆಯ ಆವರಣದಲ್ಲಿ ಈ ಉದ್ಯೋಗಮೇಳ ನಡೆಯಲಿದೆ ಎಂದು ತಿಳಿಸಿದರು. ಮೇಲ್ವಿಚಾರಕ ಸತೀಶ ವಾಲೀಕಾರ, ಪ್ರಾಚಾರ್ಯ ಅಶೋಕ ತುಪ್ಪದ, ಆಯ್ಕೆಯಾದವರಿಗೆ ಆಕರ್ಷಕ ವೇತನ,ಒವರ್‌ಟೈಮ್ ಪ್ರೋತ್ಸಾಹಧನ,ಉದ್ಯೋಗಭದ್ರತೆ ,ಉಚಿತ ಊಟ ವಸತಿ,ಇಎಸ್‌ಐ,ಪಿಎಫ್ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.ಹೆಚ್ಚಿನ ಮಾಹಿತಿಗಾಗಿ ಮೊ.9108445003,9187229281,9108445005 ಸಂಪರ್ಕಿಸಬಹುದಾಗಿದೆ.

ಬಿಎಎಸ್ ಸ್ಕೂಲ್‌ಗೆ ಸಿಬಿಎಸ್‌ಇ ಮಾನ್ಯತೆ: ಸ್ಟೇಟ್ ಸಿಲೆಬಸ್‌ನಿಂದ ಸಿಬಿಎಸ್‌ಇ ಬೋರ್ಡ್ನ ಮಾನ್ಯತೆ ಬಿಎಎಸ್ ಶಾಲೆಗೆ ದೊರಕಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ, ಕಾರ್ಯದರ್ಶಿ ಸುಮಂಗಲಾ ಶಿವನಗೌಡ ಬಿರಾದಾರ ಹೇಳಿದರು.ಶಾಲೆ ಸಂಕೇತ ಸಂಖ್ಯೆ 47447 ಇದ್ದು ಸಿಬಿಎಸ್‌ಇ ಬೋರ್ಡ್ನ ಮಾನ್ಯತೆ ಸಂಖ್ಯೆ 831763 ಇದೆ ಎಂದು ತಿಳಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ