Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ