Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ