Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ