Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ