Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ