Rishab Shetty: Huge outrage against Rishab Shetty..! Pro-con debate on social media

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ.

Join Our Telegram: https://t.me/dcgkannada

‘ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ. ನನ್ನ ದೇಶ, ನನ್ನ ರಾಜ್ಯ ನಮ್ಮ ಭಾಷೆ ನನ್ನ ಹೆಮ್ಮೆ. ಈ ವಿಚಾರಗಳ ಕುರಿತು ಪಾಸಿಟಿವ್ ಅಂಶಗಳನ್ನು ಯಾಕೆ ತೋರಿಸಬಾರದು. ನಾನು ನನ್ನ ಸಿನಿಮಾಗಳಲ್ಲಿ ಪಾಸಿಟಿವ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ‘ಕಾಂತಾರ’ ಖ್ಯಾತಿಯ ನಟ ರಿಷಬ್ ಶೆಟ್ಟಿ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ರಿಷಬ್ ಶೆಟ್ಟಿ ಅವರ ಈ ಹೇಳಿಕೆಯನ್ನು ಹಲವು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾದವು. ಕೆಲವರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಬಹಳಷ್ಟು ಮಂದಿ ರಿಷಬ್ ಶೆಟ್ಟಿ ಹೇಳಿಕೆಗೆ ಮೆಚ್ಚುಗೆ ಮತ್ತು ಬೆಂಬಲವನ್ನೂ ಸೂಚಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ:

ರಿಷಬ್ ಶೆಟ್ಟಿ ಹೇಳಿರುವುದು ಸರಿ ಇದೆ. ಜಗತ್ತಿಗೆ ಭಾರತದ ಸಕಾರಾತ್ಮಕ ಅಂಶಗಳನ್ನು ತೋರಿಸಬೇಕೇ ವಿನಃ ಇಲ್ಲಿನ ಹುಳುಕುಗಳನ್ನು ಹೇಳುವುದಲ್ಲ. ರಿಷಬ್ ಶೆಟ್ಟಿ ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ ಎಂದು ಬಹಳಷ್ಟು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಅನೇಕ ಬಾಲಿವುಡ್ ಚಿತ್ರಗಳು ಭಾರತದ ಬಡತನ, ಅಸಮಾನತೆ, ಶೋಷಣೆ, ಕೊಳಗೇರಿ, ಮೂಢನಂಬಿಕೆಗಳನ್ನೇ ಸಿನಿಮಾಗಳಲ್ಲಿ ತೋರಿಸಿ, ವಿದೇಶಿ ಪ್ರೇಕ್ಷಕರಿಗೆ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು ಸುಳ್ಳಲ್ಲ.

ಅವರೆಲ್ಲರೂ ಪ್ರಶಸ್ತಿಗಾಗಿ, ಮೆಚ್ಚುಗೆಗಾಗಿ ಹಾಗೆ ಮಾಡುತ್ತಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ, ಭಾರತದ ಕುರಿತ ಉತ್ತಮ ಅಂಶಗಳನ್ನು ತೋರಿಸುತ್ತೇನೆ ಎಂದಾಗ ಅದನ್ನು ಮೆಚ್ಚಿಕೊಳ್ಳಬೇಕು ಎಂದು ನೆಟ್ಟಿಗರು ರಿಷಬ್ ಶೆಟ್ಟಿ ಪರ ನಿಂತಿದ್ದಾರೆ.

ಸಂಸದನ ಬೆಂಬಲ:

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ರಿಷಬ್ ಬೆಂಬಲಕ್ಕೆ ನಿಂತಿದ್ದಾರೆ. ‘ತನ್ನ ದೇಶ, ಭಾಷೆ, ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವವನೇ ನಿಜವಾದ ಕಲಾವಿದ. ಅದೆಷ್ಟೋ ಅವಕಾಶಗಳಿದ್ದರೂ ಜಾಗತಿಕವಾಗಿ ಈ ದೇಶವನ್ನು ಖುಣಾತ್ಮಕವಾಗಿ ತೋರಿಸಿದ ಅನೇಕ ನಟ, ನಟಿಯರಿಗೆ ರಿಷಬ್ ಮಾತುಗಳು ಪ್ರೇರಣೆಯಾಗಲಿ.

ಇದನ್ನೂ‌ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ನಮ್ಮ ನೆಲದ ಸತ್ವವನ್ನು ಪಸರಿಸುವ ಮೂಲಕ ಭಾರತದ ಮೂಲೆ ಮೂಲೆಗಳಲ್ಲಿ ವಿಭಿನ್ನ ಹಾಗೂ ಅದ್ಭುತ ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಇದೆ ಎಂಬ ಸಂದೇಶವನ್ನು ರಿಷಬ್ ಶೆಟ್ಟಿ ನೀಡುತ್ತಿದ್ದಾರೆ. ಈ ಮೂಲಕ ಅವರು ನಾಡಿನ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು