Humanitarian wishes of gentlemen should not fall prey to the hateful conspiracy of hypocrites: CM Siddaramaiah's call

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ‌ ಕರೆ

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ‌ ಕರೆ

ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು.

ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಇದನ್ನೂ ಓದಿ: Viral video: ಪಾಕಿಸ್ತಾನದಲ್ಲಿ ಯುವತಿಯ ತಲೆಗೆ CCTV ಫಿಕ್ಸ್ ಮಾಡಿದ ಪೋಷಕರು! (ವಿಡಿಯೋ ವೈರಲ್)

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು