ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.
ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು.
ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಇದನ್ನೂ ಓದಿ: Viral video: ಪಾಕಿಸ್ತಾನದಲ್ಲಿ ಯುವತಿಯ ತಲೆಗೆ CCTV ಫಿಕ್ಸ್ ಮಾಡಿದ ಪೋಷಕರು! (ವಿಡಿಯೋ ವೈರಲ್)
ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.