Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ