Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಆಸ್ಪತ್ರೆಯು ಸೇರಿದಂತೆ ತಾಲ್ಲೂಕಿನಲ್ಲಿಯ ಸರ್ಕಾರಿ ಆಸ್ಪತ್ರೆಗಳ ಆವರಣ,ಒಳ ಹೊರಗಡೆ ಶುಚಿತ್ವಕ್ಕೆ ಅಲ್ಲಿಯ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ, ಆರೋಗ್ಯ ರಕ್ಷಾ ಸಮಿತಿ,ಅರಣ್ಯ ಇಲಾಖೆ ಹಾಗೂ ಪುರಸಭೆ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಡವರು,ಮಧ್ಯಮವರ್ಗದವರಿಗೆ ಕೈಗೆಟುಕುವ ಆರೋಗ್ಯ ಸೇವೆ

ವಿಜ್ಞಾನ ಶಿಕ್ಷಕಿ ಸಂಧ್ಯಾಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ವಿಜ್ಞಾನ ಶಿಕ್ಷಕಿ ಸಂಧ್ಯಾಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ತಾಲ್ಲೂಕಿನ ಕೋಳೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಂಧ್ಯಾ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಂಧ್ಯಾ ಅವರು ಸಲ್ಲಿಸಿದ ಸಮಾಜಮುಖಿ ಸೇವೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಫೆ.೮ ರಂದು ವಿಜಯಪುರ ಜಿಲ್ಲೆ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ಮಾದರಿಯ ವಸತಿ