Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ