Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ