Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು. ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ