Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು