Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ