Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ ಆಶೀರ್ವಚನ ನೀಡಿ ಮಾತನಾಡಿದರು.

ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಳ್ಳಲಿ. ವಿವಾಹ ಬಂಧನವೆಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದಾಗಿದೆ. ಆದ್ದರಿಂದ ನಿಮ್ಮ ಬದುಕು ಬಂಗಾರವಾಗಲಿ ಪ್ರಗತಿಯತ್ತ ಸಾಗಲು ಹಿರಿಯರ ಮಾರ್ಗದರ್ಶನ ಅವಶ್ಯಕವಾಗಿರುತ್ತದೆ. ಸೊಸೆಯಾದವರು ಅತ್ತೆ-ಮಾವನನ್ನು ತಂದೆ-ತಾಯಿಯಂತೆ ಕಾಣಬೇಕು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಂಡು ಹೋಗಬೇಕೆಂದು ತಿಳಿಸಿದರು.

ಚಳಗೇರಿಯ ವೀರಸಂಗಮೇಶ್ವರ ಸ್ವಾಮಿಗಳು ಮಾತನಾಡಿ ದಂಪತಿಗಳು ತಂದೆ-ತಾಯಿಗಳಲ್ಲಿ ದೇವರನ್ನು ಕಾಣಬೇಕು. ಮನೆಯ ಹಿರಿಯರನ್ನು ಗೌರವವನ್ನು ನೀಡಬೇಕು. ಅವರ ಮಾರ್ಗದರ್ಶನದಲ್ಲಿ ಜೀವನ ಸಾಗಿದರೆ ಜೀವನ ಸಾರ್ಥಕಗೊಳ್ಳುತ್ತದೆ. ಮಕ್ಕಳ ಮದುವೆ ಮಾಡಲು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ ಎಂದರು.

ಸಂಗಮೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿ 42 ವರ್ಷದಿಂದ ನಮ್ಮ ಕಮಿಟಿಯು ಉತ್ತಮವಾಗಿ ಜಾತ್ರೆಯನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದು, ಇವತ್ತು ತಾಲೂಕಿನ ಎಲ್ಲ ಸಮಾಜದ ದಾನಿಗಳ ಮತ್ತು ಭಕ್ತರ ಸಹಾಯದಿಂದ ಇಂತಹ ದೊಡ್ಡದಾದ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು ಮುಂದೆಯೂ ಇದೆ ರೀತಿಯಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಕಮಿಟಿಯೂ ಹೋಗುತ್ತದೆ ಎಂದು ತಿಳಿಸಿದರು.

ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠ, ವಿ.ಮ.ಬ್ಯಾಂಕ ಅಧ್ಯಕ್ಷ ಶಿವಾನಂದ ಕಂಠಿ, ನಿರ್ದೇಶಕ ರವಿ ಹುಚನೂರ, ದೇವು ಡಂಬಳ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ರೇವಡಿ, ಮುಸ್ಲಿಂ ಸಮಾಜದ ನೌಕರರ ಅಧ್ಯಕ್ಷ ನೂರಸಾಬ ರೋಣದ, ಪಿಎಸ್.ಐ ಚನ್ನಯ್ಯ ದೇವೂರ, ಸಂಗಮೇಶ್ವರ ದೇವಸ್ಥಾನ ಕಮಿಟಿಯ ಕಾರ್ಯದರ್ಶಿ ಅರುಣೋದಯ ದುದ್ಗಿ ಮಾತನಾಡಿದರು.

ಶ್ರೀ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ, ನೀಲಪ್ಪ ತಪೇಲಿ, ಬಾಬು ನಾಗರಾಳ, ತಿರುಪತಿ ಕುಷ್ಟಗಿ, ಅಶೋಕ ಪಟ್ಟಣಶೆಟ್ಟಿ, ಮಹಾಂತೇ ಶ್ಯಾವಿ, ಹನಮಂತಗೌಡ ಬೆನಕನಡೋಣ , ರಾಮನಗೌಡ ಬೆಳ್ಳಿಹಾಳ, ಗಿರಿಮಲ್ಲಪ್ಪ ಹಳಪೇಟಿ, ವಿರೇಶ ಅಂಗಡಿ, ನಾರಾಯಣ ಕುರಕುಂಟಾ, ಬಸವಪ್ಪ ವಂದಾಲಿ, ಮಲ್ಲಪ್ಪ ಅಂಠರದಾನಿ, ಈಶ್ವರಪ್ಪ ಹವಾಲ್ದಾರ, ಬಸವರಾಜ ಜಮಾದರ, ನಂದಪ್ಪ ಬಾರಕೇರ, ಅಡಿವೆಪ್ಪ ಅವಾರಿ, ಸೇರಿದಂತೆ ಇತರರಿದ್ದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸಾಮೂಹಿಕ ವಿವಾಹದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 16 ಇಷ್ಟಲಿಂಗ ಅಯ್ಯಾಚಾರ ಸಮಾರಂಭ ನಡೆಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ