Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Ad
Ad

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ ಆಶೀರ್ವಚನ ನೀಡಿ ಮಾತನಾಡಿದರು.

ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಳ್ಳಲಿ. ವಿವಾಹ ಬಂಧನವೆಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದಾಗಿದೆ. ಆದ್ದರಿಂದ ನಿಮ್ಮ ಬದುಕು ಬಂಗಾರವಾಗಲಿ ಪ್ರಗತಿಯತ್ತ ಸಾಗಲು ಹಿರಿಯರ ಮಾರ್ಗದರ್ಶನ ಅವಶ್ಯಕವಾಗಿರುತ್ತದೆ. ಸೊಸೆಯಾದವರು ಅತ್ತೆ-ಮಾವನನ್ನು ತಂದೆ-ತಾಯಿಯಂತೆ ಕಾಣಬೇಕು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಂಡು ಹೋಗಬೇಕೆಂದು ತಿಳಿಸಿದರು.

ಚಳಗೇರಿಯ ವೀರಸಂಗಮೇಶ್ವರ ಸ್ವಾಮಿಗಳು ಮಾತನಾಡಿ ದಂಪತಿಗಳು ತಂದೆ-ತಾಯಿಗಳಲ್ಲಿ ದೇವರನ್ನು ಕಾಣಬೇಕು. ಮನೆಯ ಹಿರಿಯರನ್ನು ಗೌರವವನ್ನು ನೀಡಬೇಕು. ಅವರ ಮಾರ್ಗದರ್ಶನದಲ್ಲಿ ಜೀವನ ಸಾಗಿದರೆ ಜೀವನ ಸಾರ್ಥಕಗೊಳ್ಳುತ್ತದೆ. ಮಕ್ಕಳ ಮದುವೆ ಮಾಡಲು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ ಎಂದರು.

ಸಂಗಮೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿ 42 ವರ್ಷದಿಂದ ನಮ್ಮ ಕಮಿಟಿಯು ಉತ್ತಮವಾಗಿ ಜಾತ್ರೆಯನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದು, ಇವತ್ತು ತಾಲೂಕಿನ ಎಲ್ಲ ಸಮಾಜದ ದಾನಿಗಳ ಮತ್ತು ಭಕ್ತರ ಸಹಾಯದಿಂದ ಇಂತಹ ದೊಡ್ಡದಾದ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು ಮುಂದೆಯೂ ಇದೆ ರೀತಿಯಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಕಮಿಟಿಯೂ ಹೋಗುತ್ತದೆ ಎಂದು ತಿಳಿಸಿದರು.

ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠ, ವಿ.ಮ.ಬ್ಯಾಂಕ ಅಧ್ಯಕ್ಷ ಶಿವಾನಂದ ಕಂಠಿ, ನಿರ್ದೇಶಕ ರವಿ ಹುಚನೂರ, ದೇವು ಡಂಬಳ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ರೇವಡಿ, ಮುಸ್ಲಿಂ ಸಮಾಜದ ನೌಕರರ ಅಧ್ಯಕ್ಷ ನೂರಸಾಬ ರೋಣದ, ಪಿಎಸ್.ಐ ಚನ್ನಯ್ಯ ದೇವೂರ, ಸಂಗಮೇಶ್ವರ ದೇವಸ್ಥಾನ ಕಮಿಟಿಯ ಕಾರ್ಯದರ್ಶಿ ಅರುಣೋದಯ ದುದ್ಗಿ ಮಾತನಾಡಿದರು.

ಶ್ರೀ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ, ನೀಲಪ್ಪ ತಪೇಲಿ, ಬಾಬು ನಾಗರಾಳ, ತಿರುಪತಿ ಕುಷ್ಟಗಿ, ಅಶೋಕ ಪಟ್ಟಣಶೆಟ್ಟಿ, ಮಹಾಂತೇ ಶ್ಯಾವಿ, ಹನಮಂತಗೌಡ ಬೆನಕನಡೋಣ , ರಾಮನಗೌಡ ಬೆಳ್ಳಿಹಾಳ, ಗಿರಿಮಲ್ಲಪ್ಪ ಹಳಪೇಟಿ, ವಿರೇಶ ಅಂಗಡಿ, ನಾರಾಯಣ ಕುರಕುಂಟಾ, ಬಸವಪ್ಪ ವಂದಾಲಿ, ಮಲ್ಲಪ್ಪ ಅಂಠರದಾನಿ, ಈಶ್ವರಪ್ಪ ಹವಾಲ್ದಾರ, ಬಸವರಾಜ ಜಮಾದರ, ನಂದಪ್ಪ ಬಾರಕೇರ, ಅಡಿವೆಪ್ಪ ಅವಾರಿ, ಸೇರಿದಂತೆ ಇತರರಿದ್ದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸಾಮೂಹಿಕ ವಿವಾಹದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 16 ಇಷ್ಟಲಿಂಗ ಅಯ್ಯಾಚಾರ ಸಮಾರಂಭ ನಡೆಯಿತು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ