Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ ಆಶೀರ್ವಚನ ನೀಡಿ ಮಾತನಾಡಿದರು.

ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಳ್ಳಲಿ. ವಿವಾಹ ಬಂಧನವೆಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದಾಗಿದೆ. ಆದ್ದರಿಂದ ನಿಮ್ಮ ಬದುಕು ಬಂಗಾರವಾಗಲಿ ಪ್ರಗತಿಯತ್ತ ಸಾಗಲು ಹಿರಿಯರ ಮಾರ್ಗದರ್ಶನ ಅವಶ್ಯಕವಾಗಿರುತ್ತದೆ. ಸೊಸೆಯಾದವರು ಅತ್ತೆ-ಮಾವನನ್ನು ತಂದೆ-ತಾಯಿಯಂತೆ ಕಾಣಬೇಕು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಂಡು ಹೋಗಬೇಕೆಂದು ತಿಳಿಸಿದರು.

ಚಳಗೇರಿಯ ವೀರಸಂಗಮೇಶ್ವರ ಸ್ವಾಮಿಗಳು ಮಾತನಾಡಿ ದಂಪತಿಗಳು ತಂದೆ-ತಾಯಿಗಳಲ್ಲಿ ದೇವರನ್ನು ಕಾಣಬೇಕು. ಮನೆಯ ಹಿರಿಯರನ್ನು ಗೌರವವನ್ನು ನೀಡಬೇಕು. ಅವರ ಮಾರ್ಗದರ್ಶನದಲ್ಲಿ ಜೀವನ ಸಾಗಿದರೆ ಜೀವನ ಸಾರ್ಥಕಗೊಳ್ಳುತ್ತದೆ. ಮಕ್ಕಳ ಮದುವೆ ಮಾಡಲು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ ಎಂದರು.

ಸಂಗಮೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿ 42 ವರ್ಷದಿಂದ ನಮ್ಮ ಕಮಿಟಿಯು ಉತ್ತಮವಾಗಿ ಜಾತ್ರೆಯನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದು, ಇವತ್ತು ತಾಲೂಕಿನ ಎಲ್ಲ ಸಮಾಜದ ದಾನಿಗಳ ಮತ್ತು ಭಕ್ತರ ಸಹಾಯದಿಂದ ಇಂತಹ ದೊಡ್ಡದಾದ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು ಮುಂದೆಯೂ ಇದೆ ರೀತಿಯಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಕಮಿಟಿಯೂ ಹೋಗುತ್ತದೆ ಎಂದು ತಿಳಿಸಿದರು.

ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠ, ವಿ.ಮ.ಬ್ಯಾಂಕ ಅಧ್ಯಕ್ಷ ಶಿವಾನಂದ ಕಂಠಿ, ನಿರ್ದೇಶಕ ರವಿ ಹುಚನೂರ, ದೇವು ಡಂಬಳ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ರೇವಡಿ, ಮುಸ್ಲಿಂ ಸಮಾಜದ ನೌಕರರ ಅಧ್ಯಕ್ಷ ನೂರಸಾಬ ರೋಣದ, ಪಿಎಸ್.ಐ ಚನ್ನಯ್ಯ ದೇವೂರ, ಸಂಗಮೇಶ್ವರ ದೇವಸ್ಥಾನ ಕಮಿಟಿಯ ಕಾರ್ಯದರ್ಶಿ ಅರುಣೋದಯ ದುದ್ಗಿ ಮಾತನಾಡಿದರು.

ಶ್ರೀ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ, ನೀಲಪ್ಪ ತಪೇಲಿ, ಬಾಬು ನಾಗರಾಳ, ತಿರುಪತಿ ಕುಷ್ಟಗಿ, ಅಶೋಕ ಪಟ್ಟಣಶೆಟ್ಟಿ, ಮಹಾಂತೇ ಶ್ಯಾವಿ, ಹನಮಂತಗೌಡ ಬೆನಕನಡೋಣ , ರಾಮನಗೌಡ ಬೆಳ್ಳಿಹಾಳ, ಗಿರಿಮಲ್ಲಪ್ಪ ಹಳಪೇಟಿ, ವಿರೇಶ ಅಂಗಡಿ, ನಾರಾಯಣ ಕುರಕುಂಟಾ, ಬಸವಪ್ಪ ವಂದಾಲಿ, ಮಲ್ಲಪ್ಪ ಅಂಠರದಾನಿ, ಈಶ್ವರಪ್ಪ ಹವಾಲ್ದಾರ, ಬಸವರಾಜ ಜಮಾದರ, ನಂದಪ್ಪ ಬಾರಕೇರ, ಅಡಿವೆಪ್ಪ ಅವಾರಿ, ಸೇರಿದಂತೆ ಇತರರಿದ್ದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸಾಮೂಹಿಕ ವಿವಾಹದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 16 ಇಷ್ಟಲಿಂಗ ಅಯ್ಯಾಚಾರ ಸಮಾರಂಭ ನಡೆಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ