Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ ಆಶೀರ್ವಚನ ನೀಡಿ ಮಾತನಾಡಿದರು.

ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಳ್ಳಲಿ. ವಿವಾಹ ಬಂಧನವೆಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದಾಗಿದೆ. ಆದ್ದರಿಂದ ನಿಮ್ಮ ಬದುಕು ಬಂಗಾರವಾಗಲಿ ಪ್ರಗತಿಯತ್ತ ಸಾಗಲು ಹಿರಿಯರ ಮಾರ್ಗದರ್ಶನ ಅವಶ್ಯಕವಾಗಿರುತ್ತದೆ. ಸೊಸೆಯಾದವರು ಅತ್ತೆ-ಮಾವನನ್ನು ತಂದೆ-ತಾಯಿಯಂತೆ ಕಾಣಬೇಕು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಂಡು ಹೋಗಬೇಕೆಂದು ತಿಳಿಸಿದರು.

ಚಳಗೇರಿಯ ವೀರಸಂಗಮೇಶ್ವರ ಸ್ವಾಮಿಗಳು ಮಾತನಾಡಿ ದಂಪತಿಗಳು ತಂದೆ-ತಾಯಿಗಳಲ್ಲಿ ದೇವರನ್ನು ಕಾಣಬೇಕು. ಮನೆಯ ಹಿರಿಯರನ್ನು ಗೌರವವನ್ನು ನೀಡಬೇಕು. ಅವರ ಮಾರ್ಗದರ್ಶನದಲ್ಲಿ ಜೀವನ ಸಾಗಿದರೆ ಜೀವನ ಸಾರ್ಥಕಗೊಳ್ಳುತ್ತದೆ. ಮಕ್ಕಳ ಮದುವೆ ಮಾಡಲು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ ಎಂದರು.

ಸಂಗಮೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿ 42 ವರ್ಷದಿಂದ ನಮ್ಮ ಕಮಿಟಿಯು ಉತ್ತಮವಾಗಿ ಜಾತ್ರೆಯನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದು, ಇವತ್ತು ತಾಲೂಕಿನ ಎಲ್ಲ ಸಮಾಜದ ದಾನಿಗಳ ಮತ್ತು ಭಕ್ತರ ಸಹಾಯದಿಂದ ಇಂತಹ ದೊಡ್ಡದಾದ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು ಮುಂದೆಯೂ ಇದೆ ರೀತಿಯಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಕಮಿಟಿಯೂ ಹೋಗುತ್ತದೆ ಎಂದು ತಿಳಿಸಿದರು.

ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠ, ವಿ.ಮ.ಬ್ಯಾಂಕ ಅಧ್ಯಕ್ಷ ಶಿವಾನಂದ ಕಂಠಿ, ನಿರ್ದೇಶಕ ರವಿ ಹುಚನೂರ, ದೇವು ಡಂಬಳ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ರೇವಡಿ, ಮುಸ್ಲಿಂ ಸಮಾಜದ ನೌಕರರ ಅಧ್ಯಕ್ಷ ನೂರಸಾಬ ರೋಣದ, ಪಿಎಸ್.ಐ ಚನ್ನಯ್ಯ ದೇವೂರ, ಸಂಗಮೇಶ್ವರ ದೇವಸ್ಥಾನ ಕಮಿಟಿಯ ಕಾರ್ಯದರ್ಶಿ ಅರುಣೋದಯ ದುದ್ಗಿ ಮಾತನಾಡಿದರು.

ಶ್ರೀ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ, ನೀಲಪ್ಪ ತಪೇಲಿ, ಬಾಬು ನಾಗರಾಳ, ತಿರುಪತಿ ಕುಷ್ಟಗಿ, ಅಶೋಕ ಪಟ್ಟಣಶೆಟ್ಟಿ, ಮಹಾಂತೇ ಶ್ಯಾವಿ, ಹನಮಂತಗೌಡ ಬೆನಕನಡೋಣ , ರಾಮನಗೌಡ ಬೆಳ್ಳಿಹಾಳ, ಗಿರಿಮಲ್ಲಪ್ಪ ಹಳಪೇಟಿ, ವಿರೇಶ ಅಂಗಡಿ, ನಾರಾಯಣ ಕುರಕುಂಟಾ, ಬಸವಪ್ಪ ವಂದಾಲಿ, ಮಲ್ಲಪ್ಪ ಅಂಠರದಾನಿ, ಈಶ್ವರಪ್ಪ ಹವಾಲ್ದಾರ, ಬಸವರಾಜ ಜಮಾದರ, ನಂದಪ್ಪ ಬಾರಕೇರ, ಅಡಿವೆಪ್ಪ ಅವಾರಿ, ಸೇರಿದಂತೆ ಇತರರಿದ್ದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸಾಮೂಹಿಕ ವಿವಾಹದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 16 ಇಷ್ಟಲಿಂಗ ಅಯ್ಯಾಚಾರ ಸಮಾರಂಭ ನಡೆಯಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು