Hunagund: Shivnagowda Jadiappa Gowda Chairman of Chikkaadapur to PLD Bank, Nagara Vice Chairman

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ ಅಧ್ಯಕ್ಷರಾಗಿ‌ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ್ರ, ಉಪಾಧ್ಯಕ್ಷರಾಗಿ ಪ್ರಭಾಕರ ಸಿದ್ರಾಮಪ್ಪ ನಾಗರಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.

ಪಿಎಲ್‌ಡಿ ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗಿದೆ.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ