Hunagund: Shivnagowda Jadiappa Gowda Chairman of Chikkaadapur to PLD Bank, Nagara Vice Chairman

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ ಅಧ್ಯಕ್ಷರಾಗಿ‌ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ್ರ, ಉಪಾಧ್ಯಕ್ಷರಾಗಿ ಪ್ರಭಾಕರ ಸಿದ್ರಾಮಪ್ಪ ನಾಗರಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.

ಪಿಎಲ್‌ಡಿ ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು