Hunagund: This is the lifeblood of success: MLA Kashappanavara

Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಹುನಗುಂದ: ಶಿಸ್ತು, ಬದ್ಧತೆ, ಸಂಯಮ, ಏಕಾಗ್ರತೆೆಗಳೇ ಯಶಸ್ಸಿನ ಜೀವಾಳಗಳು ಎಂದು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಕಾಲೇಜು ಒಕ್ಕೂಟ, ಎನ್.ಎಸ್.ಎಸ್. ಕಾರ್ಯಚಟುವಟಿಕೆ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ನಿವೃತ್ತರು ಮತ್ತು ದಾನಿಗಳ ಸತ್ಕಾರ ಸಮಾರಂಭವನ್ನು ಗುರವಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನ ಅದರಲ್ಲೂ ಪಿಯು ಹಂತದ ವಿದ್ಯಾರ್ಥಿ ಜೀವನ ಬದುಕಿನಲ್ಲಿ ದಿಕ್ಸೂಚಿ ಅವಧಿಯಾಗಿದ್ದು ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮೈಗೂಡಿಸಿಕೊಂಡು ಸತತ ಅಧ್ಯಯನದ ಮೂಲಕ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಪ್ರಜಾಪ್ರಭುತ್ವದ ಆಶಯವನ್ನು ಅನುಷ್ಠಾನಕ್ಕೆ ತರುವಲ್ಲಿ ವಿದ್ಯಾರ್ಥಿಗಳ ಪಾತ್ರ ತುಂಬ ಮಹತ್ವದ್ದಿದೆ. ವಿದ್ಯಾರ್ಥಿ ಪ್ರತಿನಿಧಿಗಳಾದವರು ಕಾಲೇಜಿನಲ್ಲಿ ಆ ಆಶಯಕ್ಕೆ ಬದ್ಧರಾಗಿರಬೇಕೆಂದರು.

ಸರ್ಕಾರ ಪ್ರತಿವರ್ಷ ಸಾವಿರಾರು ಕೋಟಿ ಹಣವನ್ನು ಶಿಕ್ಷಣಕ್ಕಾಗಿ ಖರ್ಚು ಮಾಡುತ್ತಿದ್ದು ಎಲ್ಲ ಮಕ್ಕಳು ಅದರ ಸದುಪಯೋಗಪಡಿಸಿಕೊಳ್ಳಬೇಕೆಂದರಲ್ಲದೇ ಮಹಿಳಾ ಸಬಲೀಕರಣಕ್ಕೆ ಪೂರಕವಾಗುವಂತೆ ಹುನಗುಂದದಲ್ಲಿ ಮಹಿಳಾ ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ಸ್ಥಾಪಿಸಲು ಮೊದಲ ಆದ್ಯತೆ ನೀಡಲಾಗುವದು ಎಂದರು.

ತಹಶೀಲ್ದಾರ್ ನಿಂಗಪ್ಪ ಬಿರಾದಾರ ಮಾತನಾಡಿ, ಕಠಿಣ ಪರಿಶ್ರಮದ ಮೂಲಕ ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಂಡು ಮಾದರಿ ಪ್ರಜೆಗಳಾಗಬೇಕೆಂದರಲ್ಲದೇ ನಿವೃತ್ತರಾದ ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಅವರ ಸೇವೆಯನ್ನು ಸ್ಮರಿಸಿದರು.

ಇನ್ನೋರ್ವ ಅತಿಥಿ ಪ್ರಥಮ ದರ್ಜೆ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿಯವರು ಮಾತನಾಡಿ, ಹುನಗುಂದದಲ್ಲಿ ಉತ್ತಮ ಶೈಕ್ಷಣಕ ವಾತಾವರಣವಿದ್ದು ಅದರ ಸದುಪಯೋಗಕ್ಕೆ ಎಲ್ಲರೂ ಕೈಗೂಡಿಸಬೇಕೆಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ತಹಶೀಲ್ದಾರ್ ನಿಂಗಪ್ಪ ಬಿರಾದಾರ, ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಇವರನ್ನು ಕಾಲೇಜಿನ ಪರವಾಗಿ ಸತ್ಕರಿಸಲಾಯಿತು.

ಸನ್ಮಾನಿತರ ಪರವಾಗಿ ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹಾಂತೇಶ ಪರೂತಿ ಮತ್ತು ಸರ್ವ ಸದಸ್ಯರು, ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

ಸೇವಂತಿ ಬೆಣಗಿ ಪ್ರಾರ್ಥಿಸಿದರು. ಪ್ರಾಚಾರ್ಯ ಎಸ್.ಕೆ. ಹೂಲಗೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಕೆ ಶಶಿಮಠ ಪ್ರತಿಜ್ಞಾವಿಧಿ ಬೋಧಿಸಿದರು. ಡಾ.ಎನ್.ವಾಯ್.ನದಾಫ ನಿರೂಪಿಸಿದರು. ಎಚ್.ಟಿ.ಅಗಸಿಮುಂದಿನ ವಂದಿಸಿದರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ