Hunagund: This is the lifeblood of success: MLA Kashappanavara

Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಹುನಗುಂದ: ಶಿಸ್ತು, ಬದ್ಧತೆ, ಸಂಯಮ, ಏಕಾಗ್ರತೆೆಗಳೇ ಯಶಸ್ಸಿನ ಜೀವಾಳಗಳು ಎಂದು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಕಾಲೇಜು ಒಕ್ಕೂಟ, ಎನ್.ಎಸ್.ಎಸ್. ಕಾರ್ಯಚಟುವಟಿಕೆ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ನಿವೃತ್ತರು ಮತ್ತು ದಾನಿಗಳ ಸತ್ಕಾರ ಸಮಾರಂಭವನ್ನು ಗುರವಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನ ಅದರಲ್ಲೂ ಪಿಯು ಹಂತದ ವಿದ್ಯಾರ್ಥಿ ಜೀವನ ಬದುಕಿನಲ್ಲಿ ದಿಕ್ಸೂಚಿ ಅವಧಿಯಾಗಿದ್ದು ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮೈಗೂಡಿಸಿಕೊಂಡು ಸತತ ಅಧ್ಯಯನದ ಮೂಲಕ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಪ್ರಜಾಪ್ರಭುತ್ವದ ಆಶಯವನ್ನು ಅನುಷ್ಠಾನಕ್ಕೆ ತರುವಲ್ಲಿ ವಿದ್ಯಾರ್ಥಿಗಳ ಪಾತ್ರ ತುಂಬ ಮಹತ್ವದ್ದಿದೆ. ವಿದ್ಯಾರ್ಥಿ ಪ್ರತಿನಿಧಿಗಳಾದವರು ಕಾಲೇಜಿನಲ್ಲಿ ಆ ಆಶಯಕ್ಕೆ ಬದ್ಧರಾಗಿರಬೇಕೆಂದರು.

ಸರ್ಕಾರ ಪ್ರತಿವರ್ಷ ಸಾವಿರಾರು ಕೋಟಿ ಹಣವನ್ನು ಶಿಕ್ಷಣಕ್ಕಾಗಿ ಖರ್ಚು ಮಾಡುತ್ತಿದ್ದು ಎಲ್ಲ ಮಕ್ಕಳು ಅದರ ಸದುಪಯೋಗಪಡಿಸಿಕೊಳ್ಳಬೇಕೆಂದರಲ್ಲದೇ ಮಹಿಳಾ ಸಬಲೀಕರಣಕ್ಕೆ ಪೂರಕವಾಗುವಂತೆ ಹುನಗುಂದದಲ್ಲಿ ಮಹಿಳಾ ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ಸ್ಥಾಪಿಸಲು ಮೊದಲ ಆದ್ಯತೆ ನೀಡಲಾಗುವದು ಎಂದರು.

ತಹಶೀಲ್ದಾರ್ ನಿಂಗಪ್ಪ ಬಿರಾದಾರ ಮಾತನಾಡಿ, ಕಠಿಣ ಪರಿಶ್ರಮದ ಮೂಲಕ ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಂಡು ಮಾದರಿ ಪ್ರಜೆಗಳಾಗಬೇಕೆಂದರಲ್ಲದೇ ನಿವೃತ್ತರಾದ ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಅವರ ಸೇವೆಯನ್ನು ಸ್ಮರಿಸಿದರು.

ಇನ್ನೋರ್ವ ಅತಿಥಿ ಪ್ರಥಮ ದರ್ಜೆ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿಯವರು ಮಾತನಾಡಿ, ಹುನಗುಂದದಲ್ಲಿ ಉತ್ತಮ ಶೈಕ್ಷಣಕ ವಾತಾವರಣವಿದ್ದು ಅದರ ಸದುಪಯೋಗಕ್ಕೆ ಎಲ್ಲರೂ ಕೈಗೂಡಿಸಬೇಕೆಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ತಹಶೀಲ್ದಾರ್ ನಿಂಗಪ್ಪ ಬಿರಾದಾರ, ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಇವರನ್ನು ಕಾಲೇಜಿನ ಪರವಾಗಿ ಸತ್ಕರಿಸಲಾಯಿತು.

ಸನ್ಮಾನಿತರ ಪರವಾಗಿ ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹಾಂತೇಶ ಪರೂತಿ ಮತ್ತು ಸರ್ವ ಸದಸ್ಯರು, ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

ಸೇವಂತಿ ಬೆಣಗಿ ಪ್ರಾರ್ಥಿಸಿದರು. ಪ್ರಾಚಾರ್ಯ ಎಸ್.ಕೆ. ಹೂಲಗೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಕೆ ಶಶಿಮಠ ಪ್ರತಿಜ್ಞಾವಿಧಿ ಬೋಧಿಸಿದರು. ಡಾ.ಎನ್.ವಾಯ್.ನದಾಫ ನಿರೂಪಿಸಿದರು. ಎಚ್.ಟಿ.ಅಗಸಿಮುಂದಿನ ವಂದಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ