ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಹುನಗುಂದ: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿ ಘಟನೆ ನಡೆಯಿತು.

ಆಸ್ಪತ್ರೆಗೆ ಮೂಲಸೌಲಭ್ಯ ನೀಡುವಂತೆ ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ರೋಹಿತ ಬಾರಕೇರ ಮಾತನಾಡಿ, ಕಳೆದ ಐದು ವರ್ಷದಿಂದ ಪ್ರತಿ ಬಾರಿ ಮಳೆಯಾದಾಗ ಆಸ್ಪತ್ರೆಗೆಯ ಹಿಂದುಗಡೆಯ ಲೇಔಟ್ ಮತ್ತು ಜಮೀನುಗಳ ನೀರು, ಅವೈಜ್ಞಾನಿಕ ಚರಂಡಿಯಿಂದ ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ನುಗ್ಗಿ ಮತ್ತು ನೀರಿನ ಬಸಿಸೆಲೆಯಿಂದ ನೀರು ನಿಂತು ಆಸ್ಪತ್ರೆಯು ಈಜುಗೊಳದಂತೆ ಆಗಿದ್ದು, ಆಸ್ಪತ್ರೆಯಲ್ಲಿ ನೀರು ನಿಂತಿದ್ದರಿಂದ ರೋಗಿಗಳಿಗೆ ವೈದ್ಯರು ಚಿಕಿತ್ಸೆಯನ್ನು ನೀಡಲು ತೀವ್ರ ತೊಂದರೆಯಾಗುತ್ತಿದ್ದು ಸಾಕಷ್ಟು ಬಾರಿ ಕರವೇ ಸಂಘಟಯ ಮೂಲಕ ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳಿಗೆ ಶಾಸಕರಿಗೆ, ಸಚಿವರಿಗೆ ಮನವಿ ಮೂಲಕ ತಿಳಿಸಿದರು.

ರೋಗಿಗಳಿಗೆ ಹಾಗೂ ವೈದ್ಯರಿಗೆ ತೊಂದರೆಯಾಗುತ್ತಿದ್ದು, ನೀರು ನಿಲ್ಲದಂತೆ ಕ್ರಮವಹಿಸಬೇಕು. ಇಲ್ಲವಾದರೆ ಉಗ್ರವಾದ ಹೋರಾಟವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಘಟಕ ಅಧ್ಯಕ್ಷ ಹುಸೇನ ಸಂದಿಮನಿ ಮಾತನಾಡಿ, ಮಳೆಯ ನೀರು ಆಸ್ಪತ್ರೆಯಲ್ಲಿ ನೀರು ನುಗ್ಗಿರುವದರಿಂದ ಆಸ್ಪತ್ರೆಯ ತುರ್ತುನಿಗಾ ಘಟಕ, ಔಷಧಿ ವಿತರಣಾ ಕೇಂದ್ರ, ರಕ್ತ ಗುಂಪು ತಪಾಸಣೆ ಕೇಂದ್ರ, ಎಕ್ಸರೇ ರೂಮ್, ಎಂ.ಎನ್.ಆರ್.ಸಿ ಘಟಕ, ಪಿಎಚ್‌ಸಿ ಕೇಂದ್ರ ಸ್ಕ್ಯಾನಿಂಗ್ ಸೆಂಟರ್, ಆಯುಷ್ಯಾನ್ ಕೇಂದ್ರ ಸೇರಿದಂತೆ ಅನೇಕ ಕೇಂದ್ರಗಳಿಗೆ ನೀರು ಆವರಿಸಿರುವದರಿಂದ ರೋಗಿಗಳು ಪರದಾಡುವಂತಾಗಿದೆ ಕೂಡಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೀರು ನಿಲ್ಲದಂತೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಕರವೇ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ನವೀದ ಸಂಧಿಮನಿ ಸೇರಿದಂತೆ ಇತರರು ಇದ್ದರು.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ