ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಕೊರಟಗೆರೆ: ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಯಲ್ಲಿ ಬೀಗ್‌ ಟ್ವಿಸ್ಟ್ ಸಿಕ್ಕಿದೆ.

3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು.

ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರಿಗೆ ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ 6ಜನ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರ ತಂಡ ಯಶಸ್ವಿ ಆಗಿದ್ದಾರೆ.

ಅಂಚೆಕಚೇರಿಯ ಸಿಬ್ಬಂದಿ ಮೃತ ಪ್ರಕಾಶದ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು(36 ವರ್ಷ), ಮಲ್ಲೇಕಾವಿನ ಹರ್ಷುತಾ (28 ವರ್ಷ), ಸೋಮಶೇಖರ್ (37 ವರ್ಷ), ಮಹೇಶ್(32), ಕಂಬದಹಳ್ಳಿಯ ದರ್ಶನ್(24), ಬಾಗೂರು ರಂಗಸ್ವಾಮಿ ಎಂಬ 6ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಅನಾಥವಾದ 2ವರ್ಷದ ಗಂಡು ಮಗು: ಗುಲ್ಬರ್ಗಾ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಇದೇ ಇನ್ಸ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮಲ್ಲೇಕಾವಿನ ಆರೋಪಿ ಹರ್ಷಿತಾ ಜೊತೆ ಮದುವೆಯಾಗಿ 3ವರ್ಷವಾಗಿ 2ವರ್ಷದ ಗಂಡು ಮಗುವಿದೆ.

ಕಳೆದ 3 ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂರಾಜು ಅಲಿಯಾಸ್ ಗುಂಡನ ಜೊತೆ ಮನೆ-ಗಂಡ ಮತ್ತು ಮಗು ಬಿಟ್ಟು ಓಡಿಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿಸಂಧಾನ ಆಗಿತ್ತು.

ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗಿ 2ವರ್ಷದ ಗಂಡುಮಗು ಅನಾಥವಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನಗೌಡ, ಯೊಗೀಶ್, ಎಎಸೈ ಮಂಜುನಾಥ ೬ಜನ ಆರೋಪಿಗಳನ್ನು ಕೊಲೆಯಾದ 24ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 6ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್