ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಕೊರಟಗೆರೆ: ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಯಲ್ಲಿ ಬೀಗ್‌ ಟ್ವಿಸ್ಟ್ ಸಿಕ್ಕಿದೆ.

3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು.

ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರಿಗೆ ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ 6ಜನ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರ ತಂಡ ಯಶಸ್ವಿ ಆಗಿದ್ದಾರೆ.

ಅಂಚೆಕಚೇರಿಯ ಸಿಬ್ಬಂದಿ ಮೃತ ಪ್ರಕಾಶದ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು(36 ವರ್ಷ), ಮಲ್ಲೇಕಾವಿನ ಹರ್ಷುತಾ (28 ವರ್ಷ), ಸೋಮಶೇಖರ್ (37 ವರ್ಷ), ಮಹೇಶ್(32), ಕಂಬದಹಳ್ಳಿಯ ದರ್ಶನ್(24), ಬಾಗೂರು ರಂಗಸ್ವಾಮಿ ಎಂಬ 6ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಅನಾಥವಾದ 2ವರ್ಷದ ಗಂಡು ಮಗು: ಗುಲ್ಬರ್ಗಾ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಇದೇ ಇನ್ಸ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮಲ್ಲೇಕಾವಿನ ಆರೋಪಿ ಹರ್ಷಿತಾ ಜೊತೆ ಮದುವೆಯಾಗಿ 3ವರ್ಷವಾಗಿ 2ವರ್ಷದ ಗಂಡು ಮಗುವಿದೆ.

ಕಳೆದ 3 ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂರಾಜು ಅಲಿಯಾಸ್ ಗುಂಡನ ಜೊತೆ ಮನೆ-ಗಂಡ ಮತ್ತು ಮಗು ಬಿಟ್ಟು ಓಡಿಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿಸಂಧಾನ ಆಗಿತ್ತು.

ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗಿ 2ವರ್ಷದ ಗಂಡುಮಗು ಅನಾಥವಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನಗೌಡ, ಯೊಗೀಶ್, ಎಎಸೈ ಮಂಜುನಾಥ ೬ಜನ ಆರೋಪಿಗಳನ್ನು ಕೊಲೆಯಾದ 24ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 6ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ