ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಕೊರಟಗೆರೆ: ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಯಲ್ಲಿ ಬೀಗ್‌ ಟ್ವಿಸ್ಟ್ ಸಿಕ್ಕಿದೆ.

3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು.

ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರಿಗೆ ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ 6ಜನ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರ ತಂಡ ಯಶಸ್ವಿ ಆಗಿದ್ದಾರೆ.

ಅಂಚೆಕಚೇರಿಯ ಸಿಬ್ಬಂದಿ ಮೃತ ಪ್ರಕಾಶದ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು(36 ವರ್ಷ), ಮಲ್ಲೇಕಾವಿನ ಹರ್ಷುತಾ (28 ವರ್ಷ), ಸೋಮಶೇಖರ್ (37 ವರ್ಷ), ಮಹೇಶ್(32), ಕಂಬದಹಳ್ಳಿಯ ದರ್ಶನ್(24), ಬಾಗೂರು ರಂಗಸ್ವಾಮಿ ಎಂಬ 6ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಅನಾಥವಾದ 2ವರ್ಷದ ಗಂಡು ಮಗು: ಗುಲ್ಬರ್ಗಾ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಇದೇ ಇನ್ಸ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮಲ್ಲೇಕಾವಿನ ಆರೋಪಿ ಹರ್ಷಿತಾ ಜೊತೆ ಮದುವೆಯಾಗಿ 3ವರ್ಷವಾಗಿ 2ವರ್ಷದ ಗಂಡು ಮಗುವಿದೆ.

ಕಳೆದ 3 ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂರಾಜು ಅಲಿಯಾಸ್ ಗುಂಡನ ಜೊತೆ ಮನೆ-ಗಂಡ ಮತ್ತು ಮಗು ಬಿಟ್ಟು ಓಡಿಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿಸಂಧಾನ ಆಗಿತ್ತು.

ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗಿ 2ವರ್ಷದ ಗಂಡುಮಗು ಅನಾಥವಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನಗೌಡ, ಯೊಗೀಶ್, ಎಎಸೈ ಮಂಜುನಾಥ ೬ಜನ ಆರೋಪಿಗಳನ್ನು ಕೊಲೆಯಾದ 24ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 6ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ