ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಕೊರಟಗೆರೆ: ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಯಲ್ಲಿ ಬೀಗ್‌ ಟ್ವಿಸ್ಟ್ ಸಿಕ್ಕಿದೆ.

3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು.

ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರಿಗೆ ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ 6ಜನ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರ ತಂಡ ಯಶಸ್ವಿ ಆಗಿದ್ದಾರೆ.

ಅಂಚೆಕಚೇರಿಯ ಸಿಬ್ಬಂದಿ ಮೃತ ಪ್ರಕಾಶದ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು(36 ವರ್ಷ), ಮಲ್ಲೇಕಾವಿನ ಹರ್ಷುತಾ (28 ವರ್ಷ), ಸೋಮಶೇಖರ್ (37 ವರ್ಷ), ಮಹೇಶ್(32), ಕಂಬದಹಳ್ಳಿಯ ದರ್ಶನ್(24), ಬಾಗೂರು ರಂಗಸ್ವಾಮಿ ಎಂಬ 6ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಅನಾಥವಾದ 2ವರ್ಷದ ಗಂಡು ಮಗು: ಗುಲ್ಬರ್ಗಾ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಇದೇ ಇನ್ಸ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮಲ್ಲೇಕಾವಿನ ಆರೋಪಿ ಹರ್ಷಿತಾ ಜೊತೆ ಮದುವೆಯಾಗಿ 3ವರ್ಷವಾಗಿ 2ವರ್ಷದ ಗಂಡು ಮಗುವಿದೆ.

ಕಳೆದ 3 ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂರಾಜು ಅಲಿಯಾಸ್ ಗುಂಡನ ಜೊತೆ ಮನೆ-ಗಂಡ ಮತ್ತು ಮಗು ಬಿಟ್ಟು ಓಡಿಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿಸಂಧಾನ ಆಗಿತ್ತು.

ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗಿ 2ವರ್ಷದ ಗಂಡುಮಗು ಅನಾಥವಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನಗೌಡ, ಯೊಗೀಶ್, ಎಎಸೈ ಮಂಜುನಾಥ ೬ಜನ ಆರೋಪಿಗಳನ್ನು ಕೊಲೆಯಾದ 24ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 6ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ