I am not an opportunistic politician: Nad Gowda

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ ರೂ., ಮುಂದಿನ ವರ್ಷ 60 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ಜಿಡಿಪಿಯಲ್ಲಿ ರಾಜ್ಯದ ಸ್ಥಾನಮಾನದ ಕುರಿತು ಹೆಮ್ಮೆ ವ್ಯಕ್ತಪಡಿಸಿದೆ. ಜಿಡಿಪಿಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿ ಇದೆ ಎಂದರು.

ಎರಡು ವರ್ಷದಲ್ಲಿ ಹಣ ನಾನು ಎಷ್ಟು ಹಣ ತಂದಿದ್ದೇನೆ. ಬಿಜೆಪಿ ಸರ್ಕಾರದ ಕೊನೆಯ ವರ್ಷದಲ್ಲಿ ಆರ್ಥಿಕ ಶಿಸ್ತು ಎಷ್ಟಿತ್ತು. ಜನರಿಗೆ ಉಪಯೋಗಕಾರಿ ಕೆಲಸಗಳನ್ನು ಕೈಗೊಳ್ಳುವ ಬದಲು ಸ್ವಹಿತದ ಕೆಲಸಗಳನ್ನೇ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ 1.20 ಲಕ್ಷ ಕೋಟಿ ರೂ.ಬಾಕಿ ಹೊರೆ ಹೊರೆಸಿದ್ದಾರೆ ಎಂದು ಆರೋಪಿಸಿದರು.

ಕೆರೆ ತುಂಬುವ ಯೋಜನೆಗೆ ನೀಲನಕ್ಷೆ ಸಿದ್ದಪಡಿಸಿದ್ದು ಖರ್ಗೆ, ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲರು ಕೊನೆಯ ಹಳ್ಳಿಗಳಿಗೆ ನೀರು ತಲುಪಿಸುವುದಕ್ಕೆ ಬೇಕಾದ ಯೋಜನೆ ರೂಪಿಸುವ ಜೊತೆಗೆ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗಬಾರದು ಎಂದು ಕೆರೆ ತುಂಬುವ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.

ಬೂದಿಹಾಳ ಪೀರಾಪೂರ ಯೋಜನೆ ಕಾಂಗ್ರೆಸ್ ಮಾಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವವರು ನಡೆದಿರುವ ಕೆಲಸಗಳನ್ನು ಗಮನಿಸಲಿ. ಅಮೃತ .2 ಯೋಜನೆಯಡಿ 14 ಕೋಟಿ ಕೆಲಸಕ್ಕೆ ಟೆಂಡರ್ ಮುಗಿದಿದೆ.ಮುದ್ದೇಬಿಹಾಳ ಮೆಗಾಮಾರ್ಟ್ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ. ಮುದ್ದೇಬಿಹಾಳ, ತಾಳೀಕೋಟಿ, ನಾಲತವಾಡ ಪಟ್ಟಣಗಳ ಅಭಿವೃದ್ಧಿಗೆ 20 ಕೋಟಿ ರೂ. ಸಿ.ಎಂ ಅಭಿವೃದ್ಧಿ ಅನುದಾನದಲ್ಲಿ ನೀಡಲಾಗಿದೆ. ಮುದ್ದೇಬಿಹಾಳ ಆರೋಗ್ಯ ಕೇಂದ್ರದ ದುರಸ್ತಿಗೆ 1.70 ಕೋಟಿ ನೀಡಲಾಗಿದೆ. ಶಿರಾಡೋಣ ಲಿಂಗಸೂರು ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಆಯ್ದ ಸ್ಥಳಗಳಲ್ಲಿ ಅಭಿವೃದ್ಧಿ ಪಡಿಸಲು ಹಣ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಡಿ ವಿಜಯಪುರ ದಿಂಡವಾರ ರಸ್ತೆ ಅಭಿವೃದ್ಧಿಗೆ ಕೆಶಿಪ್ ಅಡಿ 300ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಶಾಸಕರು ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಹಂಚಿಕೊಂಡರು.

ತಮ್ಮ ಅಧಿಕಾರ ಅವಧಿಯಲ್ಲಿ ಒಂದಾದರೂ ಮೊರಾರ್ಜಿ ಸ್ಕೂಲ್ ತಂದಿದ್ದಾರೆಯೇ ಎಂದು ನಡಹಳ್ಳಿ ಅವರನ್ನು ಪ್ರಶ್ನಿಸಿದ ನಾಡಗೌಡರು, ಇಣಚಗಲ್‌ನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಆರಂಭಿಸಲಾಗಿದೆ. ಕಂಪೌಂಡಗೆ 2 ಕೋಟಿ ಬಿಡುಗಡೆ ಮಾಡಲಾಗುವುದು. ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯನ್ನು 8.65 ಕೋಟಿಯಲ್ಲಿ ಕಟ್ಟಿಸಲಾಗಿದೆ. ಸರೂರ ರೇವಣಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನದ ಅಭಿವೃದ್ಧಿಗೆ 4 ಕೋಟಿ ನೀಡಲಾಗಿದೆ. ಯಲಗೂರು ದೇವಸ್ಥಾನದ ಅಭಿವೃದ್ಧಿಗೆ 2 ಕೋಟಿ ನೀಡಲಾಗಿದೆ. ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿ ರಿಪೇರಿಗೆ 4 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ಹೊಸದಾಗಿ ನವೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ನಾಡಗೌಡರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡ ವಾಯ್. ಎಚ್. ವಿಜಯಕರ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ನಾಮನಿರ್ದೇಶಿತ ಸದಸ್ಯ ಗೋಪಿ ಮಡಿವಾಳರ ಇದ್ದರು.

ಹಸಿರು ಶಾಲು ಹಾಕಿಕೊಂಡು ರೈತರನ್ನೇ ಮರೆತಿದ್ದೀರಿ, ನಿಮ್ಮ ಅಧಿಕಾರವಧಿಯಲ್ಲಿ ಕೃಷಿ ಸಂಶೋಧನಾ ಕೇಂದ್ರ ತಂದು ಆರಂಭಿಸಬಹುದಿತ್ತು. ಯಾಕೆ ಕೇವಲ ಹಸಿರು ಶಾಲು ಹಾಕಿಕೊಂಡು ರೈತನ ಮಗ ಎನ್ನುತ್ತಿರಲ್ಲ ರೈತರಿಗೆ ಅನುಕೂಲ ಮಾಡಿಕೊಡಬಹುದಾಗಿತ್ತಲ್ಲ. ಯಾಕೆ ಮಾಡಿಲ್ಲ ಎಂದು ನಡಹಳ್ಳಿ ಅವರ ಹೆಸರು ಪ್ರಸ್ತಾಪಿಸದೇ ನಾಡಗೌಡರು ಪ್ರಶ್ನಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ