I am not an opportunistic politician: Nad Gowda

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ ರೂ., ಮುಂದಿನ ವರ್ಷ 60 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ಜಿಡಿಪಿಯಲ್ಲಿ ರಾಜ್ಯದ ಸ್ಥಾನಮಾನದ ಕುರಿತು ಹೆಮ್ಮೆ ವ್ಯಕ್ತಪಡಿಸಿದೆ. ಜಿಡಿಪಿಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿ ಇದೆ ಎಂದರು.

ಎರಡು ವರ್ಷದಲ್ಲಿ ಹಣ ನಾನು ಎಷ್ಟು ಹಣ ತಂದಿದ್ದೇನೆ. ಬಿಜೆಪಿ ಸರ್ಕಾರದ ಕೊನೆಯ ವರ್ಷದಲ್ಲಿ ಆರ್ಥಿಕ ಶಿಸ್ತು ಎಷ್ಟಿತ್ತು. ಜನರಿಗೆ ಉಪಯೋಗಕಾರಿ ಕೆಲಸಗಳನ್ನು ಕೈಗೊಳ್ಳುವ ಬದಲು ಸ್ವಹಿತದ ಕೆಲಸಗಳನ್ನೇ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ 1.20 ಲಕ್ಷ ಕೋಟಿ ರೂ.ಬಾಕಿ ಹೊರೆ ಹೊರೆಸಿದ್ದಾರೆ ಎಂದು ಆರೋಪಿಸಿದರು.

ಕೆರೆ ತುಂಬುವ ಯೋಜನೆಗೆ ನೀಲನಕ್ಷೆ ಸಿದ್ದಪಡಿಸಿದ್ದು ಖರ್ಗೆ, ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲರು ಕೊನೆಯ ಹಳ್ಳಿಗಳಿಗೆ ನೀರು ತಲುಪಿಸುವುದಕ್ಕೆ ಬೇಕಾದ ಯೋಜನೆ ರೂಪಿಸುವ ಜೊತೆಗೆ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗಬಾರದು ಎಂದು ಕೆರೆ ತುಂಬುವ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.

ಬೂದಿಹಾಳ ಪೀರಾಪೂರ ಯೋಜನೆ ಕಾಂಗ್ರೆಸ್ ಮಾಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವವರು ನಡೆದಿರುವ ಕೆಲಸಗಳನ್ನು ಗಮನಿಸಲಿ. ಅಮೃತ .2 ಯೋಜನೆಯಡಿ 14 ಕೋಟಿ ಕೆಲಸಕ್ಕೆ ಟೆಂಡರ್ ಮುಗಿದಿದೆ.ಮುದ್ದೇಬಿಹಾಳ ಮೆಗಾಮಾರ್ಟ್ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ. ಮುದ್ದೇಬಿಹಾಳ, ತಾಳೀಕೋಟಿ, ನಾಲತವಾಡ ಪಟ್ಟಣಗಳ ಅಭಿವೃದ್ಧಿಗೆ 20 ಕೋಟಿ ರೂ. ಸಿ.ಎಂ ಅಭಿವೃದ್ಧಿ ಅನುದಾನದಲ್ಲಿ ನೀಡಲಾಗಿದೆ. ಮುದ್ದೇಬಿಹಾಳ ಆರೋಗ್ಯ ಕೇಂದ್ರದ ದುರಸ್ತಿಗೆ 1.70 ಕೋಟಿ ನೀಡಲಾಗಿದೆ. ಶಿರಾಡೋಣ ಲಿಂಗಸೂರು ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಆಯ್ದ ಸ್ಥಳಗಳಲ್ಲಿ ಅಭಿವೃದ್ಧಿ ಪಡಿಸಲು ಹಣ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಡಿ ವಿಜಯಪುರ ದಿಂಡವಾರ ರಸ್ತೆ ಅಭಿವೃದ್ಧಿಗೆ ಕೆಶಿಪ್ ಅಡಿ 300ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಶಾಸಕರು ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಹಂಚಿಕೊಂಡರು.

ತಮ್ಮ ಅಧಿಕಾರ ಅವಧಿಯಲ್ಲಿ ಒಂದಾದರೂ ಮೊರಾರ್ಜಿ ಸ್ಕೂಲ್ ತಂದಿದ್ದಾರೆಯೇ ಎಂದು ನಡಹಳ್ಳಿ ಅವರನ್ನು ಪ್ರಶ್ನಿಸಿದ ನಾಡಗೌಡರು, ಇಣಚಗಲ್‌ನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಆರಂಭಿಸಲಾಗಿದೆ. ಕಂಪೌಂಡಗೆ 2 ಕೋಟಿ ಬಿಡುಗಡೆ ಮಾಡಲಾಗುವುದು. ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯನ್ನು 8.65 ಕೋಟಿಯಲ್ಲಿ ಕಟ್ಟಿಸಲಾಗಿದೆ. ಸರೂರ ರೇವಣಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನದ ಅಭಿವೃದ್ಧಿಗೆ 4 ಕೋಟಿ ನೀಡಲಾಗಿದೆ. ಯಲಗೂರು ದೇವಸ್ಥಾನದ ಅಭಿವೃದ್ಧಿಗೆ 2 ಕೋಟಿ ನೀಡಲಾಗಿದೆ. ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿ ರಿಪೇರಿಗೆ 4 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ಹೊಸದಾಗಿ ನವೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ನಾಡಗೌಡರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡ ವಾಯ್. ಎಚ್. ವಿಜಯಕರ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ನಾಮನಿರ್ದೇಶಿತ ಸದಸ್ಯ ಗೋಪಿ ಮಡಿವಾಳರ ಇದ್ದರು.

ಹಸಿರು ಶಾಲು ಹಾಕಿಕೊಂಡು ರೈತರನ್ನೇ ಮರೆತಿದ್ದೀರಿ, ನಿಮ್ಮ ಅಧಿಕಾರವಧಿಯಲ್ಲಿ ಕೃಷಿ ಸಂಶೋಧನಾ ಕೇಂದ್ರ ತಂದು ಆರಂಭಿಸಬಹುದಿತ್ತು. ಯಾಕೆ ಕೇವಲ ಹಸಿರು ಶಾಲು ಹಾಕಿಕೊಂಡು ರೈತನ ಮಗ ಎನ್ನುತ್ತಿರಲ್ಲ ರೈತರಿಗೆ ಅನುಕೂಲ ಮಾಡಿಕೊಡಬಹುದಾಗಿತ್ತಲ್ಲ. ಯಾಕೆ ಮಾಡಿಲ್ಲ ಎಂದು ನಡಹಳ್ಳಿ ಅವರ ಹೆಸರು ಪ್ರಸ್ತಾಪಿಸದೇ ನಾಡಗೌಡರು ಪ್ರಶ್ನಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ