I am not an opportunistic politician: Nad Gowda

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ ರೂ., ಮುಂದಿನ ವರ್ಷ 60 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ಜಿಡಿಪಿಯಲ್ಲಿ ರಾಜ್ಯದ ಸ್ಥಾನಮಾನದ ಕುರಿತು ಹೆಮ್ಮೆ ವ್ಯಕ್ತಪಡಿಸಿದೆ. ಜಿಡಿಪಿಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿ ಇದೆ ಎಂದರು.

ಎರಡು ವರ್ಷದಲ್ಲಿ ಹಣ ನಾನು ಎಷ್ಟು ಹಣ ತಂದಿದ್ದೇನೆ. ಬಿಜೆಪಿ ಸರ್ಕಾರದ ಕೊನೆಯ ವರ್ಷದಲ್ಲಿ ಆರ್ಥಿಕ ಶಿಸ್ತು ಎಷ್ಟಿತ್ತು. ಜನರಿಗೆ ಉಪಯೋಗಕಾರಿ ಕೆಲಸಗಳನ್ನು ಕೈಗೊಳ್ಳುವ ಬದಲು ಸ್ವಹಿತದ ಕೆಲಸಗಳನ್ನೇ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ 1.20 ಲಕ್ಷ ಕೋಟಿ ರೂ.ಬಾಕಿ ಹೊರೆ ಹೊರೆಸಿದ್ದಾರೆ ಎಂದು ಆರೋಪಿಸಿದರು.

ಕೆರೆ ತುಂಬುವ ಯೋಜನೆಗೆ ನೀಲನಕ್ಷೆ ಸಿದ್ದಪಡಿಸಿದ್ದು ಖರ್ಗೆ, ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲರು ಕೊನೆಯ ಹಳ್ಳಿಗಳಿಗೆ ನೀರು ತಲುಪಿಸುವುದಕ್ಕೆ ಬೇಕಾದ ಯೋಜನೆ ರೂಪಿಸುವ ಜೊತೆಗೆ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗಬಾರದು ಎಂದು ಕೆರೆ ತುಂಬುವ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.

ಬೂದಿಹಾಳ ಪೀರಾಪೂರ ಯೋಜನೆ ಕಾಂಗ್ರೆಸ್ ಮಾಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವವರು ನಡೆದಿರುವ ಕೆಲಸಗಳನ್ನು ಗಮನಿಸಲಿ. ಅಮೃತ .2 ಯೋಜನೆಯಡಿ 14 ಕೋಟಿ ಕೆಲಸಕ್ಕೆ ಟೆಂಡರ್ ಮುಗಿದಿದೆ.ಮುದ್ದೇಬಿಹಾಳ ಮೆಗಾಮಾರ್ಟ್ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ. ಮುದ್ದೇಬಿಹಾಳ, ತಾಳೀಕೋಟಿ, ನಾಲತವಾಡ ಪಟ್ಟಣಗಳ ಅಭಿವೃದ್ಧಿಗೆ 20 ಕೋಟಿ ರೂ. ಸಿ.ಎಂ ಅಭಿವೃದ್ಧಿ ಅನುದಾನದಲ್ಲಿ ನೀಡಲಾಗಿದೆ. ಮುದ್ದೇಬಿಹಾಳ ಆರೋಗ್ಯ ಕೇಂದ್ರದ ದುರಸ್ತಿಗೆ 1.70 ಕೋಟಿ ನೀಡಲಾಗಿದೆ. ಶಿರಾಡೋಣ ಲಿಂಗಸೂರು ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಆಯ್ದ ಸ್ಥಳಗಳಲ್ಲಿ ಅಭಿವೃದ್ಧಿ ಪಡಿಸಲು ಹಣ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಡಿ ವಿಜಯಪುರ ದಿಂಡವಾರ ರಸ್ತೆ ಅಭಿವೃದ್ಧಿಗೆ ಕೆಶಿಪ್ ಅಡಿ 300ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಶಾಸಕರು ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಹಂಚಿಕೊಂಡರು.

ತಮ್ಮ ಅಧಿಕಾರ ಅವಧಿಯಲ್ಲಿ ಒಂದಾದರೂ ಮೊರಾರ್ಜಿ ಸ್ಕೂಲ್ ತಂದಿದ್ದಾರೆಯೇ ಎಂದು ನಡಹಳ್ಳಿ ಅವರನ್ನು ಪ್ರಶ್ನಿಸಿದ ನಾಡಗೌಡರು, ಇಣಚಗಲ್‌ನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಆರಂಭಿಸಲಾಗಿದೆ. ಕಂಪೌಂಡಗೆ 2 ಕೋಟಿ ಬಿಡುಗಡೆ ಮಾಡಲಾಗುವುದು. ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯನ್ನು 8.65 ಕೋಟಿಯಲ್ಲಿ ಕಟ್ಟಿಸಲಾಗಿದೆ. ಸರೂರ ರೇವಣಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನದ ಅಭಿವೃದ್ಧಿಗೆ 4 ಕೋಟಿ ನೀಡಲಾಗಿದೆ. ಯಲಗೂರು ದೇವಸ್ಥಾನದ ಅಭಿವೃದ್ಧಿಗೆ 2 ಕೋಟಿ ನೀಡಲಾಗಿದೆ. ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿ ರಿಪೇರಿಗೆ 4 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ಹೊಸದಾಗಿ ನವೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ನಾಡಗೌಡರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡ ವಾಯ್. ಎಚ್. ವಿಜಯಕರ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ನಾಮನಿರ್ದೇಶಿತ ಸದಸ್ಯ ಗೋಪಿ ಮಡಿವಾಳರ ಇದ್ದರು.

ಹಸಿರು ಶಾಲು ಹಾಕಿಕೊಂಡು ರೈತರನ್ನೇ ಮರೆತಿದ್ದೀರಿ, ನಿಮ್ಮ ಅಧಿಕಾರವಧಿಯಲ್ಲಿ ಕೃಷಿ ಸಂಶೋಧನಾ ಕೇಂದ್ರ ತಂದು ಆರಂಭಿಸಬಹುದಿತ್ತು. ಯಾಕೆ ಕೇವಲ ಹಸಿರು ಶಾಲು ಹಾಕಿಕೊಂಡು ರೈತನ ಮಗ ಎನ್ನುತ್ತಿರಲ್ಲ ರೈತರಿಗೆ ಅನುಕೂಲ ಮಾಡಿಕೊಡಬಹುದಾಗಿತ್ತಲ್ಲ. ಯಾಕೆ ಮಾಡಿಲ್ಲ ಎಂದು ನಡಹಳ್ಳಿ ಅವರ ಹೆಸರು ಪ್ರಸ್ತಾಪಿಸದೇ ನಾಡಗೌಡರು ಪ್ರಶ್ನಿಸಿದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್