I am not an opportunistic politician: Nad Gowda

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ ರೂ., ಮುಂದಿನ ವರ್ಷ 60 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ಜಿಡಿಪಿಯಲ್ಲಿ ರಾಜ್ಯದ ಸ್ಥಾನಮಾನದ ಕುರಿತು ಹೆಮ್ಮೆ ವ್ಯಕ್ತಪಡಿಸಿದೆ. ಜಿಡಿಪಿಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿ ಇದೆ ಎಂದರು.

ಎರಡು ವರ್ಷದಲ್ಲಿ ಹಣ ನಾನು ಎಷ್ಟು ಹಣ ತಂದಿದ್ದೇನೆ. ಬಿಜೆಪಿ ಸರ್ಕಾರದ ಕೊನೆಯ ವರ್ಷದಲ್ಲಿ ಆರ್ಥಿಕ ಶಿಸ್ತು ಎಷ್ಟಿತ್ತು. ಜನರಿಗೆ ಉಪಯೋಗಕಾರಿ ಕೆಲಸಗಳನ್ನು ಕೈಗೊಳ್ಳುವ ಬದಲು ಸ್ವಹಿತದ ಕೆಲಸಗಳನ್ನೇ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ 1.20 ಲಕ್ಷ ಕೋಟಿ ರೂ.ಬಾಕಿ ಹೊರೆ ಹೊರೆಸಿದ್ದಾರೆ ಎಂದು ಆರೋಪಿಸಿದರು.

ಕೆರೆ ತುಂಬುವ ಯೋಜನೆಗೆ ನೀಲನಕ್ಷೆ ಸಿದ್ದಪಡಿಸಿದ್ದು ಖರ್ಗೆ, ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲರು ಕೊನೆಯ ಹಳ್ಳಿಗಳಿಗೆ ನೀರು ತಲುಪಿಸುವುದಕ್ಕೆ ಬೇಕಾದ ಯೋಜನೆ ರೂಪಿಸುವ ಜೊತೆಗೆ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗಬಾರದು ಎಂದು ಕೆರೆ ತುಂಬುವ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.

ಬೂದಿಹಾಳ ಪೀರಾಪೂರ ಯೋಜನೆ ಕಾಂಗ್ರೆಸ್ ಮಾಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವವರು ನಡೆದಿರುವ ಕೆಲಸಗಳನ್ನು ಗಮನಿಸಲಿ. ಅಮೃತ .2 ಯೋಜನೆಯಡಿ 14 ಕೋಟಿ ಕೆಲಸಕ್ಕೆ ಟೆಂಡರ್ ಮುಗಿದಿದೆ.ಮುದ್ದೇಬಿಹಾಳ ಮೆಗಾಮಾರ್ಟ್ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ. ಮುದ್ದೇಬಿಹಾಳ, ತಾಳೀಕೋಟಿ, ನಾಲತವಾಡ ಪಟ್ಟಣಗಳ ಅಭಿವೃದ್ಧಿಗೆ 20 ಕೋಟಿ ರೂ. ಸಿ.ಎಂ ಅಭಿವೃದ್ಧಿ ಅನುದಾನದಲ್ಲಿ ನೀಡಲಾಗಿದೆ. ಮುದ್ದೇಬಿಹಾಳ ಆರೋಗ್ಯ ಕೇಂದ್ರದ ದುರಸ್ತಿಗೆ 1.70 ಕೋಟಿ ನೀಡಲಾಗಿದೆ. ಶಿರಾಡೋಣ ಲಿಂಗಸೂರು ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಆಯ್ದ ಸ್ಥಳಗಳಲ್ಲಿ ಅಭಿವೃದ್ಧಿ ಪಡಿಸಲು ಹಣ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಡಿ ವಿಜಯಪುರ ದಿಂಡವಾರ ರಸ್ತೆ ಅಭಿವೃದ್ಧಿಗೆ ಕೆಶಿಪ್ ಅಡಿ 300ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಶಾಸಕರು ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಹಂಚಿಕೊಂಡರು.

ತಮ್ಮ ಅಧಿಕಾರ ಅವಧಿಯಲ್ಲಿ ಒಂದಾದರೂ ಮೊರಾರ್ಜಿ ಸ್ಕೂಲ್ ತಂದಿದ್ದಾರೆಯೇ ಎಂದು ನಡಹಳ್ಳಿ ಅವರನ್ನು ಪ್ರಶ್ನಿಸಿದ ನಾಡಗೌಡರು, ಇಣಚಗಲ್‌ನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಆರಂಭಿಸಲಾಗಿದೆ. ಕಂಪೌಂಡಗೆ 2 ಕೋಟಿ ಬಿಡುಗಡೆ ಮಾಡಲಾಗುವುದು. ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯನ್ನು 8.65 ಕೋಟಿಯಲ್ಲಿ ಕಟ್ಟಿಸಲಾಗಿದೆ. ಸರೂರ ರೇವಣಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನದ ಅಭಿವೃದ್ಧಿಗೆ 4 ಕೋಟಿ ನೀಡಲಾಗಿದೆ. ಯಲಗೂರು ದೇವಸ್ಥಾನದ ಅಭಿವೃದ್ಧಿಗೆ 2 ಕೋಟಿ ನೀಡಲಾಗಿದೆ. ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿ ರಿಪೇರಿಗೆ 4 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ಹೊಸದಾಗಿ ನವೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ನಾಡಗೌಡರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡ ವಾಯ್. ಎಚ್. ವಿಜಯಕರ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ನಾಮನಿರ್ದೇಶಿತ ಸದಸ್ಯ ಗೋಪಿ ಮಡಿವಾಳರ ಇದ್ದರು.

ಹಸಿರು ಶಾಲು ಹಾಕಿಕೊಂಡು ರೈತರನ್ನೇ ಮರೆತಿದ್ದೀರಿ, ನಿಮ್ಮ ಅಧಿಕಾರವಧಿಯಲ್ಲಿ ಕೃಷಿ ಸಂಶೋಧನಾ ಕೇಂದ್ರ ತಂದು ಆರಂಭಿಸಬಹುದಿತ್ತು. ಯಾಕೆ ಕೇವಲ ಹಸಿರು ಶಾಲು ಹಾಕಿಕೊಂಡು ರೈತನ ಮಗ ಎನ್ನುತ್ತಿರಲ್ಲ ರೈತರಿಗೆ ಅನುಕೂಲ ಮಾಡಿಕೊಡಬಹುದಾಗಿತ್ತಲ್ಲ. ಯಾಕೆ ಮಾಡಿಲ್ಲ ಎಂದು ನಡಹಳ್ಳಿ ಅವರ ಹೆಸರು ಪ್ರಸ್ತಾಪಿಸದೇ ನಾಡಗೌಡರು ಪ್ರಶ್ನಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ