ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ ಜೊತೆಗೆ ಖರ್ಗೆ ಲಿಸ್ಟ್’ನಲ್ಲಿ ಇದ್ದೇನೆ.ಕಾಂಗ್ರೆಸ್ ಹೈಕಮಾಂಡ್  ಲಿಸ್ಟ್’ನಲ್ಲೂ  ಇದ್ದೇನೆ’ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

 ತಾಲ್ಲೂಕಿನ  ಹಡಲಗೇರಿ ಗ್ರಾಮದಲ್ಲಿ  ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್  ರಾಜ್ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿOಗ್ ವಿಭಾಗದ ನೇತೃತ್ವದಲ್ಲಿ 1.50 ಕೋಟಿ ರೂ.ವೆಚ್ಚದಲ್ಲಿ ಹಡಲಗೇರಿ-ಆಲಮಟ್ಟಿ ಮುಖ್ಯರಸ್ತೆ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಿಕೆಶಿ,ಸಿದ್ಧರಾಮಯ್ಯ ಮಧ್ಯೆ ಹಾಗೆ ಹೀಗೆ ಎಂದು ಟಿವಿಯವರು ಬಿಂಬಿಸಿದರು. ಆದರೆ ಹೈಕಮಾಂಡ್  ಹೇಳಿದಂತೆ ಅವರು ಕೇಳುವುದಾಗಿ  ಹೇಳಿದ್ದಾರೆ.ಸರ್ಕಾರ  ಗಟ್ಟಿಯಾಗಿದೆ.134 ಶಾಸಕರು ಜೊತೆಗೆ ಇದ್ದು ಸರ್ಕಾರ ಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರದ್ದು ರಾಜ್ಯಗಳಲ್ಲಿ ಗಲಾಟೆ ಉಂಟು ಮಾಡುವ ಉದ್ದೇಶ ಹೊಂದಿದೆ ಎಂಬುದಕ್ಕೆ ಕಬ್ಬಿನ ಬೆಳೆಯ ಬೆಲೆಗಾಗಿ ನಡೆದ ಹೋರಾಟ ನಿದರ್ಶನ.ಬೆಂಬಲ ಬೆಲೆ ನಿಗದಿ ಮಾಡುವ ಅಧಿಕಾರ ಕೇಂದ್ರಕ್ಕಿದ್ದರೂ ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡುವ ಕೆಟ್ಟ ಪ್ರವೃತ್ತಿ ಕೇಂದ್ರ ಸರ್ಕಾರದ್ದು ಎಂದು ಟೀಕಿಸಿದರು.

ಬೆಳೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ಅನ್ಯಾಯ,ತಾರತಮ್ಯ ಮಾಡುವುದಿಲ್ಲ.ಈಗಾಗಲೇ ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಜಮೆ ಮಾಡಿದೆ ಎಂದು ತಿಳಿಸಿದರು.

ಮುಖಂಡ ಬಿ.ಆರ್.ನಾಡಗೌಡ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಸಂತೋಷ  ಚವ್ಹಾಣ(ಹುಲ್ಲೂರ),ಹಣಮಂತ ತಳ್ಳೀಕೇರಿ,ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃಬಾಯಿ ಬಿರಾದಾರ,ಉಪಾಧ್ಯಕ್ಷ ಅಬ್ದುಲರಜಾಕ್ ಮೊಕಾಶಿ, ಸಿದ್ದನಗೌಡ ಬಗಲಿ,ಶಿವಪುತ್ರ ಹರಿಂದ್ರಾಳ, ಮೌನೇಶ ಮಾದರ,ಮುತ್ತಪ್ಪ ಮುರಾಳ,ಗುತ್ತಿಗೆದಾರರಾದ ಯಲ್ಲಪ್ಪ ಚಲವಾದಿ, ಭೀಮಣ್ಣ ಹರಿಂದ್ರಾಳ, ಹಣಮಂತ ಖಿಲಾರಟ್ಟಿ,ಬಡಕಪ್ಪ ಹರಿಂದ್ರಾಳ,ತಾಪA ಅಧಿಕಾರಿ ಎಸ್.ಎಸ್.ಗಣಾಚಾರಿ, ನಾಗರಾಜ ಕುಲಕರ್ಣಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ