ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ ಜೊತೆಗೆ ಖರ್ಗೆ ಲಿಸ್ಟ್’ನಲ್ಲಿ ಇದ್ದೇನೆ.ಕಾಂಗ್ರೆಸ್ ಹೈಕಮಾಂಡ್  ಲಿಸ್ಟ್’ನಲ್ಲೂ  ಇದ್ದೇನೆ’ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

 ತಾಲ್ಲೂಕಿನ  ಹಡಲಗೇರಿ ಗ್ರಾಮದಲ್ಲಿ  ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್  ರಾಜ್ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿOಗ್ ವಿಭಾಗದ ನೇತೃತ್ವದಲ್ಲಿ 1.50 ಕೋಟಿ ರೂ.ವೆಚ್ಚದಲ್ಲಿ ಹಡಲಗೇರಿ-ಆಲಮಟ್ಟಿ ಮುಖ್ಯರಸ್ತೆ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಿಕೆಶಿ,ಸಿದ್ಧರಾಮಯ್ಯ ಮಧ್ಯೆ ಹಾಗೆ ಹೀಗೆ ಎಂದು ಟಿವಿಯವರು ಬಿಂಬಿಸಿದರು. ಆದರೆ ಹೈಕಮಾಂಡ್  ಹೇಳಿದಂತೆ ಅವರು ಕೇಳುವುದಾಗಿ  ಹೇಳಿದ್ದಾರೆ.ಸರ್ಕಾರ  ಗಟ್ಟಿಯಾಗಿದೆ.134 ಶಾಸಕರು ಜೊತೆಗೆ ಇದ್ದು ಸರ್ಕಾರ ಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರದ್ದು ರಾಜ್ಯಗಳಲ್ಲಿ ಗಲಾಟೆ ಉಂಟು ಮಾಡುವ ಉದ್ದೇಶ ಹೊಂದಿದೆ ಎಂಬುದಕ್ಕೆ ಕಬ್ಬಿನ ಬೆಳೆಯ ಬೆಲೆಗಾಗಿ ನಡೆದ ಹೋರಾಟ ನಿದರ್ಶನ.ಬೆಂಬಲ ಬೆಲೆ ನಿಗದಿ ಮಾಡುವ ಅಧಿಕಾರ ಕೇಂದ್ರಕ್ಕಿದ್ದರೂ ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡುವ ಕೆಟ್ಟ ಪ್ರವೃತ್ತಿ ಕೇಂದ್ರ ಸರ್ಕಾರದ್ದು ಎಂದು ಟೀಕಿಸಿದರು.

ಬೆಳೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ಅನ್ಯಾಯ,ತಾರತಮ್ಯ ಮಾಡುವುದಿಲ್ಲ.ಈಗಾಗಲೇ ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಜಮೆ ಮಾಡಿದೆ ಎಂದು ತಿಳಿಸಿದರು.

ಮುಖಂಡ ಬಿ.ಆರ್.ನಾಡಗೌಡ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಸಂತೋಷ  ಚವ್ಹಾಣ(ಹುಲ್ಲೂರ),ಹಣಮಂತ ತಳ್ಳೀಕೇರಿ,ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃಬಾಯಿ ಬಿರಾದಾರ,ಉಪಾಧ್ಯಕ್ಷ ಅಬ್ದುಲರಜಾಕ್ ಮೊಕಾಶಿ, ಸಿದ್ದನಗೌಡ ಬಗಲಿ,ಶಿವಪುತ್ರ ಹರಿಂದ್ರಾಳ, ಮೌನೇಶ ಮಾದರ,ಮುತ್ತಪ್ಪ ಮುರಾಳ,ಗುತ್ತಿಗೆದಾರರಾದ ಯಲ್ಲಪ್ಪ ಚಲವಾದಿ, ಭೀಮಣ್ಣ ಹರಿಂದ್ರಾಳ, ಹಣಮಂತ ಖಿಲಾರಟ್ಟಿ,ಬಡಕಪ್ಪ ಹರಿಂದ್ರಾಳ,ತಾಪA ಅಧಿಕಾರಿ ಎಸ್.ಎಸ್.ಗಣಾಚಾರಿ, ನಾಗರಾಜ ಕುಲಕರ್ಣಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ