MB Patil with CM Siddaramaiah in muda case

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

Ad
Ad

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಸಾಲಿಗೆ ಇನ್ನೋರ್ವ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವರಾಗಿರುವ ಎಂ.ಬಿ ಪಾಟೀಲ್ (MB Patil) ಸೇರಿಕೊಂಡಿದ್ದಾರೆ.

ಸೀನಿಯಾರಿಟಿ ಬೇಕಿಲ್ಲ:

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಅಂತೂ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಇರ್ತಾರೆ. ಸಿಎಂ ಆಗೋಕೆ ಸೀನಿಯಾರಿಟಿ ಬೇಕಿಲ್ಲ. ಒಂದು ಮಾತು ಹೇಳ್ತೇನೆ. ಕಾಂಗ್ರೆಸ್ ನಲ್ಲಿ ನಾನು ಕೂಡ ಸಿಎಂ ಆಗ್ತೀನಿ. ವಿಜಯಪುರದಿಂದ ಸಿಎಂ ಆದರೆ ನಾನೇ ಆಗೋದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ. ಅವ್ರು ಇವಾಗ ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ ಎನ್ನುವ ಮೂಲಕ ಶಿವಾನಂದ ಪಾಟೀಲ್ ಗೆ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಟೀಲ್‌ಗೆ ತಿರುಗೇಟು:

ಎಂ.ಬಿ ಪಾಟೀಲ್ ಗಿಂತ ಮೊದಲು ಇನ್ನೂ ಹಿರಿಯರಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ನನಗಿಂತ ಸೀನಿಯರ್ಸ್‌ಗಳಿದ್ದಾರೆ. ಆದರೆ, ಸೀನಿಯರ್ಸ್ ಅನ್ನೋದು ಮಾನದಂಡ ಅಲ್ಲ. ಸಿಎಂ ಆಗೋಕೆ ಸೀನಿಯಾರಿಟಿ, ಜ್ಯೂನಿಯರಿಟಿ ಬರೋದಿಲ್ಲ. ನಾನು ಈಗಾಗಲೇ ಕಾಂಗ್ರೆಸ್ ನಲ್ಲೇ ಸೀನಿಯರ್ ಆಗಿದ್ದೇನೆ. ಶರದ್ ಪವಾರ್ ಮಹಾರಾಷ್ಟ್ರ ದಲ್ಲಿ 38 ವರ್ಷಕ್ಕೆ ಸಿಎಂ ಆದ್ರು. ದೇವರಾಜ್ ಅರಸು ಅವ್ರು ಸಿಎಂ ಆಗಿಲ್ವಾ? ಆರ್. ಗುಂಡೂರಾವ್, ಕುಮಾರಸ್ವಾಮಿ ಸಿಎಂ ಆಗಿರಲಿಲ್ಲವಾ.? ಒಂದಲ್ಲ ಒಂದು ದಿನ ನಾನು ಕೂಡ ಮುಖ್ಯಮಂತ್ರಿ ಆಗ್ತೀನಿ. ಆಸೆ ಇದೆ ಆದರೆ, ದುರಾಸೆ ಇಲ್ಲ ಎಂದರು.

ದರ್ಶನ್ ವಿಚಾರ ಗಂಭೀರವಾಗಿ ತೆಗೆದುಕೊಂಡಿದ್ದೇವೆ:

ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ಲೀಕ್ ಮಾಡಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿ ತಿಳಿದವರು. ಅವ್ರು ಈ ರೀತಿ ಮಾತಾಡೋದು ಸರಿಯಲ್ಲ. ದರ್ಶನ್ ರಾಜಾತೀಥ್ಯ ವಿಚಾರ ಗಂಭೀರವಾದ ಪ್ರಕರಣ. ನಾನು ಹೋಮ್ ಮಿನಿಸ್ಟರ್ ಆಗಿದ್ದಾಗಲೂ ಜೈಲಿನಲ್ಲಿ ಈ ರೀತಿಯ ವ್ಯವಸ್ಥೆಗಳನ್ನು ನೋಡಿದ್ದೇನೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ, ಅದಕ್ಕಾಗಿ ದರ್ಶನ್ ಅಂಡ್ ಟೀಮ್ ನ್ನು ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಫೋಟೋ ಲೀಕ್ ಆಗಿದ್ದು ಮತ್ತೆ ಎಲ್ಲರದರ ಬಗ್ಗೆ ತನಿಖೆ ಆಗ್ತಿದೆ. ಮುಡಾ ಡೈವರ್ಟ್ ಮಾಡೋಕೆ ಅದರಲ್ಲಿ ಏನಾಗಿದೆ? ಎಂದು ಪ್ರಶ್ನಿಸಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500