MB Patil with CM Siddaramaiah in muda case

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಸಾಲಿಗೆ ಇನ್ನೋರ್ವ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವರಾಗಿರುವ ಎಂ.ಬಿ ಪಾಟೀಲ್ (MB Patil) ಸೇರಿಕೊಂಡಿದ್ದಾರೆ.

ಸೀನಿಯಾರಿಟಿ ಬೇಕಿಲ್ಲ:

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಅಂತೂ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಇರ್ತಾರೆ. ಸಿಎಂ ಆಗೋಕೆ ಸೀನಿಯಾರಿಟಿ ಬೇಕಿಲ್ಲ. ಒಂದು ಮಾತು ಹೇಳ್ತೇನೆ. ಕಾಂಗ್ರೆಸ್ ನಲ್ಲಿ ನಾನು ಕೂಡ ಸಿಎಂ ಆಗ್ತೀನಿ. ವಿಜಯಪುರದಿಂದ ಸಿಎಂ ಆದರೆ ನಾನೇ ಆಗೋದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ. ಅವ್ರು ಇವಾಗ ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ ಎನ್ನುವ ಮೂಲಕ ಶಿವಾನಂದ ಪಾಟೀಲ್ ಗೆ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಟೀಲ್‌ಗೆ ತಿರುಗೇಟು:

ಎಂ.ಬಿ ಪಾಟೀಲ್ ಗಿಂತ ಮೊದಲು ಇನ್ನೂ ಹಿರಿಯರಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ನನಗಿಂತ ಸೀನಿಯರ್ಸ್‌ಗಳಿದ್ದಾರೆ. ಆದರೆ, ಸೀನಿಯರ್ಸ್ ಅನ್ನೋದು ಮಾನದಂಡ ಅಲ್ಲ. ಸಿಎಂ ಆಗೋಕೆ ಸೀನಿಯಾರಿಟಿ, ಜ್ಯೂನಿಯರಿಟಿ ಬರೋದಿಲ್ಲ. ನಾನು ಈಗಾಗಲೇ ಕಾಂಗ್ರೆಸ್ ನಲ್ಲೇ ಸೀನಿಯರ್ ಆಗಿದ್ದೇನೆ. ಶರದ್ ಪವಾರ್ ಮಹಾರಾಷ್ಟ್ರ ದಲ್ಲಿ 38 ವರ್ಷಕ್ಕೆ ಸಿಎಂ ಆದ್ರು. ದೇವರಾಜ್ ಅರಸು ಅವ್ರು ಸಿಎಂ ಆಗಿಲ್ವಾ? ಆರ್. ಗುಂಡೂರಾವ್, ಕುಮಾರಸ್ವಾಮಿ ಸಿಎಂ ಆಗಿರಲಿಲ್ಲವಾ.? ಒಂದಲ್ಲ ಒಂದು ದಿನ ನಾನು ಕೂಡ ಮುಖ್ಯಮಂತ್ರಿ ಆಗ್ತೀನಿ. ಆಸೆ ಇದೆ ಆದರೆ, ದುರಾಸೆ ಇಲ್ಲ ಎಂದರು.

ದರ್ಶನ್ ವಿಚಾರ ಗಂಭೀರವಾಗಿ ತೆಗೆದುಕೊಂಡಿದ್ದೇವೆ:

ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ಲೀಕ್ ಮಾಡಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿ ತಿಳಿದವರು. ಅವ್ರು ಈ ರೀತಿ ಮಾತಾಡೋದು ಸರಿಯಲ್ಲ. ದರ್ಶನ್ ರಾಜಾತೀಥ್ಯ ವಿಚಾರ ಗಂಭೀರವಾದ ಪ್ರಕರಣ. ನಾನು ಹೋಮ್ ಮಿನಿಸ್ಟರ್ ಆಗಿದ್ದಾಗಲೂ ಜೈಲಿನಲ್ಲಿ ಈ ರೀತಿಯ ವ್ಯವಸ್ಥೆಗಳನ್ನು ನೋಡಿದ್ದೇನೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ, ಅದಕ್ಕಾಗಿ ದರ್ಶನ್ ಅಂಡ್ ಟೀಮ್ ನ್ನು ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಫೋಟೋ ಲೀಕ್ ಆಗಿದ್ದು ಮತ್ತೆ ಎಲ್ಲರದರ ಬಗ್ಗೆ ತನಿಖೆ ಆಗ್ತಿದೆ. ಮುಡಾ ಡೈವರ್ಟ್ ಮಾಡೋಕೆ ಅದರಲ್ಲಿ ಏನಾಗಿದೆ? ಎಂದು ಪ್ರಶ್ನಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ