MB Patil with CM Siddaramaiah in muda case

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಸಾಲಿಗೆ ಇನ್ನೋರ್ವ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವರಾಗಿರುವ ಎಂ.ಬಿ ಪಾಟೀಲ್ (MB Patil) ಸೇರಿಕೊಂಡಿದ್ದಾರೆ.

ಸೀನಿಯಾರಿಟಿ ಬೇಕಿಲ್ಲ:

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಅಂತೂ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಇರ್ತಾರೆ. ಸಿಎಂ ಆಗೋಕೆ ಸೀನಿಯಾರಿಟಿ ಬೇಕಿಲ್ಲ. ಒಂದು ಮಾತು ಹೇಳ್ತೇನೆ. ಕಾಂಗ್ರೆಸ್ ನಲ್ಲಿ ನಾನು ಕೂಡ ಸಿಎಂ ಆಗ್ತೀನಿ. ವಿಜಯಪುರದಿಂದ ಸಿಎಂ ಆದರೆ ನಾನೇ ಆಗೋದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ. ಅವ್ರು ಇವಾಗ ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ ಎನ್ನುವ ಮೂಲಕ ಶಿವಾನಂದ ಪಾಟೀಲ್ ಗೆ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಟೀಲ್‌ಗೆ ತಿರುಗೇಟು:

ಎಂ.ಬಿ ಪಾಟೀಲ್ ಗಿಂತ ಮೊದಲು ಇನ್ನೂ ಹಿರಿಯರಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ನನಗಿಂತ ಸೀನಿಯರ್ಸ್‌ಗಳಿದ್ದಾರೆ. ಆದರೆ, ಸೀನಿಯರ್ಸ್ ಅನ್ನೋದು ಮಾನದಂಡ ಅಲ್ಲ. ಸಿಎಂ ಆಗೋಕೆ ಸೀನಿಯಾರಿಟಿ, ಜ್ಯೂನಿಯರಿಟಿ ಬರೋದಿಲ್ಲ. ನಾನು ಈಗಾಗಲೇ ಕಾಂಗ್ರೆಸ್ ನಲ್ಲೇ ಸೀನಿಯರ್ ಆಗಿದ್ದೇನೆ. ಶರದ್ ಪವಾರ್ ಮಹಾರಾಷ್ಟ್ರ ದಲ್ಲಿ 38 ವರ್ಷಕ್ಕೆ ಸಿಎಂ ಆದ್ರು. ದೇವರಾಜ್ ಅರಸು ಅವ್ರು ಸಿಎಂ ಆಗಿಲ್ವಾ? ಆರ್. ಗುಂಡೂರಾವ್, ಕುಮಾರಸ್ವಾಮಿ ಸಿಎಂ ಆಗಿರಲಿಲ್ಲವಾ.? ಒಂದಲ್ಲ ಒಂದು ದಿನ ನಾನು ಕೂಡ ಮುಖ್ಯಮಂತ್ರಿ ಆಗ್ತೀನಿ. ಆಸೆ ಇದೆ ಆದರೆ, ದುರಾಸೆ ಇಲ್ಲ ಎಂದರು.

ದರ್ಶನ್ ವಿಚಾರ ಗಂಭೀರವಾಗಿ ತೆಗೆದುಕೊಂಡಿದ್ದೇವೆ:

ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ಲೀಕ್ ಮಾಡಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿ ತಿಳಿದವರು. ಅವ್ರು ಈ ರೀತಿ ಮಾತಾಡೋದು ಸರಿಯಲ್ಲ. ದರ್ಶನ್ ರಾಜಾತೀಥ್ಯ ವಿಚಾರ ಗಂಭೀರವಾದ ಪ್ರಕರಣ. ನಾನು ಹೋಮ್ ಮಿನಿಸ್ಟರ್ ಆಗಿದ್ದಾಗಲೂ ಜೈಲಿನಲ್ಲಿ ಈ ರೀತಿಯ ವ್ಯವಸ್ಥೆಗಳನ್ನು ನೋಡಿದ್ದೇನೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ, ಅದಕ್ಕಾಗಿ ದರ್ಶನ್ ಅಂಡ್ ಟೀಮ್ ನ್ನು ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಫೋಟೋ ಲೀಕ್ ಆಗಿದ್ದು ಮತ್ತೆ ಎಲ್ಲರದರ ಬಗ್ಗೆ ತನಿಖೆ ಆಗ್ತಿದೆ. ಮುಡಾ ಡೈವರ್ಟ್ ಮಾಡೋಕೆ ಅದರಲ್ಲಿ ಏನಾಗಿದೆ? ಎಂದು ಪ್ರಶ್ನಿಸಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600