MB Patil with CM Siddaramaiah in muda case

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಸಾಲಿಗೆ ಇನ್ನೋರ್ವ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವರಾಗಿರುವ ಎಂ.ಬಿ ಪಾಟೀಲ್ (MB Patil) ಸೇರಿಕೊಂಡಿದ್ದಾರೆ.

ಸೀನಿಯಾರಿಟಿ ಬೇಕಿಲ್ಲ:

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಅಂತೂ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಇರ್ತಾರೆ. ಸಿಎಂ ಆಗೋಕೆ ಸೀನಿಯಾರಿಟಿ ಬೇಕಿಲ್ಲ. ಒಂದು ಮಾತು ಹೇಳ್ತೇನೆ. ಕಾಂಗ್ರೆಸ್ ನಲ್ಲಿ ನಾನು ಕೂಡ ಸಿಎಂ ಆಗ್ತೀನಿ. ವಿಜಯಪುರದಿಂದ ಸಿಎಂ ಆದರೆ ನಾನೇ ಆಗೋದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ. ಅವ್ರು ಇವಾಗ ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ ಎನ್ನುವ ಮೂಲಕ ಶಿವಾನಂದ ಪಾಟೀಲ್ ಗೆ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಟೀಲ್‌ಗೆ ತಿರುಗೇಟು:

ಎಂ.ಬಿ ಪಾಟೀಲ್ ಗಿಂತ ಮೊದಲು ಇನ್ನೂ ಹಿರಿಯರಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ನನಗಿಂತ ಸೀನಿಯರ್ಸ್‌ಗಳಿದ್ದಾರೆ. ಆದರೆ, ಸೀನಿಯರ್ಸ್ ಅನ್ನೋದು ಮಾನದಂಡ ಅಲ್ಲ. ಸಿಎಂ ಆಗೋಕೆ ಸೀನಿಯಾರಿಟಿ, ಜ್ಯೂನಿಯರಿಟಿ ಬರೋದಿಲ್ಲ. ನಾನು ಈಗಾಗಲೇ ಕಾಂಗ್ರೆಸ್ ನಲ್ಲೇ ಸೀನಿಯರ್ ಆಗಿದ್ದೇನೆ. ಶರದ್ ಪವಾರ್ ಮಹಾರಾಷ್ಟ್ರ ದಲ್ಲಿ 38 ವರ್ಷಕ್ಕೆ ಸಿಎಂ ಆದ್ರು. ದೇವರಾಜ್ ಅರಸು ಅವ್ರು ಸಿಎಂ ಆಗಿಲ್ವಾ? ಆರ್. ಗುಂಡೂರಾವ್, ಕುಮಾರಸ್ವಾಮಿ ಸಿಎಂ ಆಗಿರಲಿಲ್ಲವಾ.? ಒಂದಲ್ಲ ಒಂದು ದಿನ ನಾನು ಕೂಡ ಮುಖ್ಯಮಂತ್ರಿ ಆಗ್ತೀನಿ. ಆಸೆ ಇದೆ ಆದರೆ, ದುರಾಸೆ ಇಲ್ಲ ಎಂದರು.

ದರ್ಶನ್ ವಿಚಾರ ಗಂಭೀರವಾಗಿ ತೆಗೆದುಕೊಂಡಿದ್ದೇವೆ:

ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ಲೀಕ್ ಮಾಡಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿ ತಿಳಿದವರು. ಅವ್ರು ಈ ರೀತಿ ಮಾತಾಡೋದು ಸರಿಯಲ್ಲ. ದರ್ಶನ್ ರಾಜಾತೀಥ್ಯ ವಿಚಾರ ಗಂಭೀರವಾದ ಪ್ರಕರಣ. ನಾನು ಹೋಮ್ ಮಿನಿಸ್ಟರ್ ಆಗಿದ್ದಾಗಲೂ ಜೈಲಿನಲ್ಲಿ ಈ ರೀತಿಯ ವ್ಯವಸ್ಥೆಗಳನ್ನು ನೋಡಿದ್ದೇನೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ, ಅದಕ್ಕಾಗಿ ದರ್ಶನ್ ಅಂಡ್ ಟೀಮ್ ನ್ನು ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಫೋಟೋ ಲೀಕ್ ಆಗಿದ್ದು ಮತ್ತೆ ಎಲ್ಲರದರ ಬಗ್ಗೆ ತನಿಖೆ ಆಗ್ತಿದೆ. ಮುಡಾ ಡೈವರ್ಟ್ ಮಾಡೋಕೆ ಅದರಲ್ಲಿ ಏನಾಗಿದೆ? ಎಂದು ಪ್ರಶ್ನಿಸಿದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ