I masturbated after looking at your photo.

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಬೆಂಗಳೂರು: ‘ನಿನಗೆ ಪ್ರತಿ ತಿಂಗಳೂ 10 ಸಾವಿರ ರೂಪಾಯಿ ಕೊಡುತ್ತೇನೆ. ನನ್ನ ಜೊತೆ ಲಿವ್‌ಇನ್‌ ರಿಲೇಷನ್‌ಷಿಪ್‌ಗೆ ಒಪ್ಪು…’

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ:

ಹೀಗಂತ ಸತತವಾಗಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಂದೇಶ ರವಾನಿಸುತ್ತಿದ್ದ ಎನ್ನುವುದು ಆರೋಪಿ ಪಟ್ಟಿಯಲ್ಲಿ ಬಹಿರಂಗವಾಗಿದೆ.

ಇನ್ಸ್‌ಟಾಗ್ರಾಮ್‌ ಮೆಸೇಜ್ ಮೂಲಕ ತನ್ನ ಮರ್ಮಾಂಗದ ಫೋಟೋ ಮಾತ್ರವಲ್ಲದೆ, ತನ್ನದೇ ನಗ್ನ ವಿಡಿಯೋ ಸಹ ಕಳಿಸುತ್ತಿದ್ದ! ಅಷ್ಟೇ ಅಲ್ಲದೆ, ನಿನ್ನ ಫೋಟೋ ನೋಡಿಕೊಂಡು ನಾನು ಹಸ್ತಮೈಥುನ ಮಾಡಿಕೊಂಡೆ ಎಂಬಂಥ ಅಶ್ಲೀಲ ಸಂದೇಶವನ್ನು ಸತತವಾಗಿ ರವಾನೆ ಮಾಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತ ಕಳಿಸಿದ್ದ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪವಿತ್ರಾಗೌಡ ಅಳಿಸಿಹಾಕಿದ್ದಳು. ಆದರೆ, ಮೊಬೈಲ್‌ ರೀಟ್ರೀವ್‌ ಮೂಲಕ ರೇಣುಕಾಸ್ವಾಮಿ ಸಂದೇಶಗಳ 17 ಸ್ಕ್ರೀನ್‌ಶಾಟ್‌ಗಳು ಹಾಗೂ ವಿಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಿಂದ ಪವಿತ್ರಾಗೌಡಗೆ ಇನ್ಸ್‌ಟಾಗ್ರಾಮ್‌ನಲ್ಲಿ ಗೌತಮ್‌ ಹೆಸರಿನ ನಕಲಿ ಖಾತೆಯಿಂದ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ರೋಸಿಹೋದ ಪವಿತ್ರಾ, ಕೊನೆಗೆ ರೇಣುಕಾಸ್ವಾಮಿಗೆ ಗತಿ ಕಾಣಿಸಬೇಕು ಎಂದು ನಿರ್ಧಾರ ಮಾಡಿದ್ದಳು.

ಈ ಅಶ್ಲೀಲ ಸಂದೇಶಗಳ ಸಂಗತಿಯನ್ನು ದರ್ಶನ್‌, ಆಪ್ತರಾದ ಪವನ್‌ ಹಾಗೂ ವಿನಯ್‌ಗೆ ಪವಿತ್ರಾ ಹೇಳಿದ್ದಳು. ಕೊನೆಗೆ ರೇಣುಕಾನನ್ನು ಪತ್ತೆ ಹಚ್ಚಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್‌, ಪವಿತ್ರಾ ಹಾಗೂ ಇತರರು ಕೊಂದಿದ್ದರು.

ತಿಂಗಳಿಗೆ 10 ಸಾವಿರ ಕೊಡುವೆ ಎಂದಿದ್ದ ರೇಣುಕಾ: ‘ನಿನ್ನ ಸೌಂದರ್ಯಕ್ಕೆ ನಾನು ಸೋತು ಹೋಗಿದ್ದೇನೆ..’, ‘ನಿನ್ನ ಜೊತೆ ನಾನು ಮಾತನಾಡಬೇಕು ಕಣೆ..’, ‘ನಿನ್ನಷ್ಟು ರೂಪಸಿ ಯಾರೂ ಇಲ್ಲ ಬಿಡು..’, ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ.’, ‘ನೀನು ನೋಡುತ್ತೀಯಾ ನನ್ನ **..’ ಎಂದು ಹೇಳಿ ಮರ್ಮಾಂಗದ ಫೋಟೋ ಹಾಗೂ ವಿಡಿಯೋಗಳನ್ನು ರೇಣುಕಾಸ್ವಾಮಿ ಕಳುಹಿಸಿದ್ದಾನೆ.

ಇದನ್ನೂ ಓದಿ: Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಅಲ್ಲದೆ, ‘ನನ್ನ ಜೊತೆ ಲಿವಿಂಗ್‌ ಇನ್‌ ರಿಲೇಷನ್‌ಷಿಪ್‌ನಲ್ಲಿರು. ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡುತ್ತೇನೆ. ಬೆಂಗಳೂರಿಗೆ ನಾನು ಪ್ರತಿ ತಿಂಗಳು ಬರುತ್ತೇನೆ..’ ‘ನಿನ್ನ ಸೌಂದರ್ಯಕ್ಕೆ ಫಿದಾ ಆಗಿದ್ದೇನೆ..’, ‘ನಿನ್ನ ಜೊತೆ ಯಾವಾಗ ಸೇರುತ್ತೇನೋ..’, ನೀನು ಫೋಟೋದಲ್ಲಿ ನೋಡೋದಕ್ಕೆ ಹೀಗಿದ್ದೀಯ, ಇನ್ನೂ..’ ಹೀಗೆ ಪವಿತ್ರಾ ಗೌಡಗೆ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

Latest News

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ರಾಜ್ಯದ 30 ಸಾವಿರ ಗುತ್ತಿಗೆದಾರರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಇನ್ನೀತರ

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಮುದ್ದೇಬಿಹಾಳ ಪಟ್ಟಣದ ಶಾಂತಲಾ ಪ್ರೌಢಶಾಲೆಯ ವಿದ್ಯಾರ್ಥಿ, ತಾಲ್ಲೂಕಿನ ಗೋನಾಳ ಪಿ.ಎನ್. ಗ್ರಾಮದ ನಿವಾಸಿ ಮಹೇಶ ಬಸಪ್ಪ ಮಾದರ(16)ಎಂದು ಗುರುತಿಸಲಾಗಿದೆ.