I masturbated after looking at your photo.

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಬೆಂಗಳೂರು: ‘ನಿನಗೆ ಪ್ರತಿ ತಿಂಗಳೂ 10 ಸಾವಿರ ರೂಪಾಯಿ ಕೊಡುತ್ತೇನೆ. ನನ್ನ ಜೊತೆ ಲಿವ್‌ಇನ್‌ ರಿಲೇಷನ್‌ಷಿಪ್‌ಗೆ ಒಪ್ಪು…’

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ:

ಹೀಗಂತ ಸತತವಾಗಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಂದೇಶ ರವಾನಿಸುತ್ತಿದ್ದ ಎನ್ನುವುದು ಆರೋಪಿ ಪಟ್ಟಿಯಲ್ಲಿ ಬಹಿರಂಗವಾಗಿದೆ.

ಇನ್ಸ್‌ಟಾಗ್ರಾಮ್‌ ಮೆಸೇಜ್ ಮೂಲಕ ತನ್ನ ಮರ್ಮಾಂಗದ ಫೋಟೋ ಮಾತ್ರವಲ್ಲದೆ, ತನ್ನದೇ ನಗ್ನ ವಿಡಿಯೋ ಸಹ ಕಳಿಸುತ್ತಿದ್ದ! ಅಷ್ಟೇ ಅಲ್ಲದೆ, ನಿನ್ನ ಫೋಟೋ ನೋಡಿಕೊಂಡು ನಾನು ಹಸ್ತಮೈಥುನ ಮಾಡಿಕೊಂಡೆ ಎಂಬಂಥ ಅಶ್ಲೀಲ ಸಂದೇಶವನ್ನು ಸತತವಾಗಿ ರವಾನೆ ಮಾಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತ ಕಳಿಸಿದ್ದ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪವಿತ್ರಾಗೌಡ ಅಳಿಸಿಹಾಕಿದ್ದಳು. ಆದರೆ, ಮೊಬೈಲ್‌ ರೀಟ್ರೀವ್‌ ಮೂಲಕ ರೇಣುಕಾಸ್ವಾಮಿ ಸಂದೇಶಗಳ 17 ಸ್ಕ್ರೀನ್‌ಶಾಟ್‌ಗಳು ಹಾಗೂ ವಿಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಿಂದ ಪವಿತ್ರಾಗೌಡಗೆ ಇನ್ಸ್‌ಟಾಗ್ರಾಮ್‌ನಲ್ಲಿ ಗೌತಮ್‌ ಹೆಸರಿನ ನಕಲಿ ಖಾತೆಯಿಂದ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ರೋಸಿಹೋದ ಪವಿತ್ರಾ, ಕೊನೆಗೆ ರೇಣುಕಾಸ್ವಾಮಿಗೆ ಗತಿ ಕಾಣಿಸಬೇಕು ಎಂದು ನಿರ್ಧಾರ ಮಾಡಿದ್ದಳು.

ಈ ಅಶ್ಲೀಲ ಸಂದೇಶಗಳ ಸಂಗತಿಯನ್ನು ದರ್ಶನ್‌, ಆಪ್ತರಾದ ಪವನ್‌ ಹಾಗೂ ವಿನಯ್‌ಗೆ ಪವಿತ್ರಾ ಹೇಳಿದ್ದಳು. ಕೊನೆಗೆ ರೇಣುಕಾನನ್ನು ಪತ್ತೆ ಹಚ್ಚಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್‌, ಪವಿತ್ರಾ ಹಾಗೂ ಇತರರು ಕೊಂದಿದ್ದರು.

ತಿಂಗಳಿಗೆ 10 ಸಾವಿರ ಕೊಡುವೆ ಎಂದಿದ್ದ ರೇಣುಕಾ: ‘ನಿನ್ನ ಸೌಂದರ್ಯಕ್ಕೆ ನಾನು ಸೋತು ಹೋಗಿದ್ದೇನೆ..’, ‘ನಿನ್ನ ಜೊತೆ ನಾನು ಮಾತನಾಡಬೇಕು ಕಣೆ..’, ‘ನಿನ್ನಷ್ಟು ರೂಪಸಿ ಯಾರೂ ಇಲ್ಲ ಬಿಡು..’, ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ.’, ‘ನೀನು ನೋಡುತ್ತೀಯಾ ನನ್ನ **..’ ಎಂದು ಹೇಳಿ ಮರ್ಮಾಂಗದ ಫೋಟೋ ಹಾಗೂ ವಿಡಿಯೋಗಳನ್ನು ರೇಣುಕಾಸ್ವಾಮಿ ಕಳುಹಿಸಿದ್ದಾನೆ.

ಇದನ್ನೂ ಓದಿ: Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಅಲ್ಲದೆ, ‘ನನ್ನ ಜೊತೆ ಲಿವಿಂಗ್‌ ಇನ್‌ ರಿಲೇಷನ್‌ಷಿಪ್‌ನಲ್ಲಿರು. ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡುತ್ತೇನೆ. ಬೆಂಗಳೂರಿಗೆ ನಾನು ಪ್ರತಿ ತಿಂಗಳು ಬರುತ್ತೇನೆ..’ ‘ನಿನ್ನ ಸೌಂದರ್ಯಕ್ಕೆ ಫಿದಾ ಆಗಿದ್ದೇನೆ..’, ‘ನಿನ್ನ ಜೊತೆ ಯಾವಾಗ ಸೇರುತ್ತೇನೋ..’, ನೀನು ಫೋಟೋದಲ್ಲಿ ನೋಡೋದಕ್ಕೆ ಹೀಗಿದ್ದೀಯ, ಇನ್ನೂ..’ ಹೀಗೆ ಪವಿತ್ರಾ ಗೌಡಗೆ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ