I masturbated after looking at your photo.

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಬೆಂಗಳೂರು: ‘ನಿನಗೆ ಪ್ರತಿ ತಿಂಗಳೂ 10 ಸಾವಿರ ರೂಪಾಯಿ ಕೊಡುತ್ತೇನೆ. ನನ್ನ ಜೊತೆ ಲಿವ್‌ಇನ್‌ ರಿಲೇಷನ್‌ಷಿಪ್‌ಗೆ ಒಪ್ಪು…’

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ:

ಹೀಗಂತ ಸತತವಾಗಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಂದೇಶ ರವಾನಿಸುತ್ತಿದ್ದ ಎನ್ನುವುದು ಆರೋಪಿ ಪಟ್ಟಿಯಲ್ಲಿ ಬಹಿರಂಗವಾಗಿದೆ.

ಇನ್ಸ್‌ಟಾಗ್ರಾಮ್‌ ಮೆಸೇಜ್ ಮೂಲಕ ತನ್ನ ಮರ್ಮಾಂಗದ ಫೋಟೋ ಮಾತ್ರವಲ್ಲದೆ, ತನ್ನದೇ ನಗ್ನ ವಿಡಿಯೋ ಸಹ ಕಳಿಸುತ್ತಿದ್ದ! ಅಷ್ಟೇ ಅಲ್ಲದೆ, ನಿನ್ನ ಫೋಟೋ ನೋಡಿಕೊಂಡು ನಾನು ಹಸ್ತಮೈಥುನ ಮಾಡಿಕೊಂಡೆ ಎಂಬಂಥ ಅಶ್ಲೀಲ ಸಂದೇಶವನ್ನು ಸತತವಾಗಿ ರವಾನೆ ಮಾಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತ ಕಳಿಸಿದ್ದ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪವಿತ್ರಾಗೌಡ ಅಳಿಸಿಹಾಕಿದ್ದಳು. ಆದರೆ, ಮೊಬೈಲ್‌ ರೀಟ್ರೀವ್‌ ಮೂಲಕ ರೇಣುಕಾಸ್ವಾಮಿ ಸಂದೇಶಗಳ 17 ಸ್ಕ್ರೀನ್‌ಶಾಟ್‌ಗಳು ಹಾಗೂ ವಿಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಿಂದ ಪವಿತ್ರಾಗೌಡಗೆ ಇನ್ಸ್‌ಟಾಗ್ರಾಮ್‌ನಲ್ಲಿ ಗೌತಮ್‌ ಹೆಸರಿನ ನಕಲಿ ಖಾತೆಯಿಂದ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ರೋಸಿಹೋದ ಪವಿತ್ರಾ, ಕೊನೆಗೆ ರೇಣುಕಾಸ್ವಾಮಿಗೆ ಗತಿ ಕಾಣಿಸಬೇಕು ಎಂದು ನಿರ್ಧಾರ ಮಾಡಿದ್ದಳು.

ಈ ಅಶ್ಲೀಲ ಸಂದೇಶಗಳ ಸಂಗತಿಯನ್ನು ದರ್ಶನ್‌, ಆಪ್ತರಾದ ಪವನ್‌ ಹಾಗೂ ವಿನಯ್‌ಗೆ ಪವಿತ್ರಾ ಹೇಳಿದ್ದಳು. ಕೊನೆಗೆ ರೇಣುಕಾನನ್ನು ಪತ್ತೆ ಹಚ್ಚಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್‌, ಪವಿತ್ರಾ ಹಾಗೂ ಇತರರು ಕೊಂದಿದ್ದರು.

ತಿಂಗಳಿಗೆ 10 ಸಾವಿರ ಕೊಡುವೆ ಎಂದಿದ್ದ ರೇಣುಕಾ: ‘ನಿನ್ನ ಸೌಂದರ್ಯಕ್ಕೆ ನಾನು ಸೋತು ಹೋಗಿದ್ದೇನೆ..’, ‘ನಿನ್ನ ಜೊತೆ ನಾನು ಮಾತನಾಡಬೇಕು ಕಣೆ..’, ‘ನಿನ್ನಷ್ಟು ರೂಪಸಿ ಯಾರೂ ಇಲ್ಲ ಬಿಡು..’, ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ.’, ‘ನೀನು ನೋಡುತ್ತೀಯಾ ನನ್ನ **..’ ಎಂದು ಹೇಳಿ ಮರ್ಮಾಂಗದ ಫೋಟೋ ಹಾಗೂ ವಿಡಿಯೋಗಳನ್ನು ರೇಣುಕಾಸ್ವಾಮಿ ಕಳುಹಿಸಿದ್ದಾನೆ.

ಇದನ್ನೂ ಓದಿ: Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಅಲ್ಲದೆ, ‘ನನ್ನ ಜೊತೆ ಲಿವಿಂಗ್‌ ಇನ್‌ ರಿಲೇಷನ್‌ಷಿಪ್‌ನಲ್ಲಿರು. ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡುತ್ತೇನೆ. ಬೆಂಗಳೂರಿಗೆ ನಾನು ಪ್ರತಿ ತಿಂಗಳು ಬರುತ್ತೇನೆ..’ ‘ನಿನ್ನ ಸೌಂದರ್ಯಕ್ಕೆ ಫಿದಾ ಆಗಿದ್ದೇನೆ..’, ‘ನಿನ್ನ ಜೊತೆ ಯಾವಾಗ ಸೇರುತ್ತೇನೋ..’, ನೀನು ಫೋಟೋದಲ್ಲಿ ನೋಡೋದಕ್ಕೆ ಹೀಗಿದ್ದೀಯ, ಇನ್ನೂ..’ ಹೀಗೆ ಪವಿತ್ರಾ ಗೌಡಗೆ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು