I will give 10 thousand jobs before going to soil: Nadahalli

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ಮುದ್ದೇಬಿಹಾಳ : ನಾನು ಮತಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಜನ ಬೆಂಬಲಿಸಲಿಲ್ಲವೋ ಏನೋ ಆದರೆ ರೈತರ ಮಕ್ಕಳು ಕಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಭಾವುಕರಾಗಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ತಮ್ಮ ಫಾರ್ಮಹೌಸ್‌ನಲ್ಲಿ ಮಂಗಳವಾರ ಅಭಿಮಾನಿಗಳು, ಕಾರ್ಯಕರ್ತರು ಹಮ್ಮಿಕೊಂಡಿದ್ದ ತಮ್ಮ 56ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವೆಲ್ಲ ಜಾತಿ ವಿಷಯ ಬಂದಾಗ ಒಗ್ಗಟ್ಟು ಆಗುತ್ತೇವೆ. ಆದರೆ ಜನರ ಬದುಕು ಕಟ್ಟುವ ನಾಯಕತ್ವವನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಎಡವಿದ್ದೇವೆ. ಆಧುನಿಕ ಬದುಕು ಕಟ್ಟಿಕೊಡುವ, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಾಯಕತ್ವ ಬೇಕು. ತೊಗರಿ ಬೆಳೆ ನಷ್ಟವಾದರೂ ಈ ಸರ್ಕಾರದಿಂದ ಒಂದು ರುಪಾಯಿ ಪರಿಹಾರ ಬಂದಿಲ್ಲ. ಬರುವುದೂ ಇಲ್ಲ. ಈ ಸರ್ಕಾರ,ಈಗ ನೀವು ಆಯ್ಕೆಮಾಡಿಕೊಂಡ ಜನಪ್ರತಿನಿಧಿ ಹಾಗೆ ಇದ್ದಾರೆ. ರೈತರು ಬೆಳೆ ಇನ್ಸೂರೆನ್ಸ್ ಬಂದಿಲ್ಲ ಎಂದು ಕೇಳುತ್ತಿದ್ದಾರೆ. ಅವರಿಗೆಲ್ಲ ಈಗ ನೀವು ಬಾಯಿ ಬಡಿದುಕೊಳ್ಳಿ ಎಂದೇ ಹೇಳಿದ್ದೇನೆ ಎಂದು ತಿಳಿಸಿದರು.

ನೀರಾವರಿ ಯೋಜನೆಗಳು ಅಲ್ಲಿಗೆ ನಿಂತಿವೆ. ನಾಗರಬೆಟ್ಟ ಏತ ನೀರಾವರಿ ಯೋಜನೆ ಏನಾಗಿದೆ. ಬೂದಿಹಾಳ ಪೀರಾಪೂರ ಯೋಜನೆಗಾಗಿ ರೈತರು ಹೋರಾಟ ನಡೆಸುವಾಗ ನಾನು ಹೋರಾಟಕ್ಕೆ ಬೆಂಬಲಿಸುವುದಾಗಿ ಹೇಳುತ್ತಲೇ ಉಸ್ತುವಾರಿ ಸಚಿವರು ಓಡಿ ಬಂದು ಭರವಸೆ ಕೊಟ್ಟು ಹೋದರು. ನೀರಾವರಿಗಾಗಿ ಹೋರಾಟ ಅನಿವಾರ್ಯ ಎಂಬಂತಾಗಿದೆ ಎಂದರು.

ಮತಕ್ಷೇತ್ರದಲ್ಲಿ ಕುಡಿವ ನೀರಿನ ಯೋಜನೆ ಸಲುವಾಗಿ ಸಿಸಿ ರಸ್ತೆ ಹಾಳುಮಾಡುತ್ತಿದ್ದಾರೆ. ಆಯ್ಕೆಯಾದವರು ನಿಮ್ಮೂರಿಗೆ ಬಂದು ಧನ್ಯವಾದ ಕೂಡಾ ಹೇಳಲಿಲ್ಲ. ಮೊದಲು ಅವರಿಗೆ ಹಳ್ಳಿಗಳ ಜನಕ್ಕೆ ನೀರು ಕೊಡಲು ತಿಳಿಸಿ. ನನ್ನ ದುಡಿಮೆಯಲ್ಲಿ ಅರ್ಧ ರಾಜಕಾರಣಕ್ಕೆ, ದಾಸೋಹ ಕ್ಕೆ ವ್ಯಯ ಮಾಡಿದ್ದೇನೆ. ನನಗೆ ಮಂತ್ರಿಯಾಗಿ ಮೆರೆಯಬೇಕು ಎಂಬ ಭಾವನೆ ಇಲ್ಲ. ರೈತರ ಮಕ್ಕಳು ತಮ್ಮ ತಂದೆಯವರು ಅನುಭವಿಸಿದ ಕಷ್ಟ ಅನುಭವಿಸಬಾರದು ಎಂಬ ಕಾರಣದಿಂದ ರಾಜಕಾರಣಕ್ಕೆ ಬಂದಿದ್ದೇನೆ. ಇದು ಕೇವಲ ಭಾಷಣಕ್ಕಾಗಿ ಮಾತಲ್ಲ ಸಂಕಲ್ಪದಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿದರು. ಬಿಜೆಪಿ ಮುಖಂಡರಾದ ರಮೇಶ ಬಿದನೂರ, ರವಿಕಾಂತ ಬಗಲಿ, ಪ್ರಭುಗೌಡ ಬಿರಾದಾರ, ಪ್ರಭು ಕಡಿ, ಬಿ.ಪಿ.ಕುಲಕರ್ಣಿ, ಮಲಕೇಂದ್ರಗೌಡ ಪಾಟೀಲ, ಗಂಗಾಧರ ನಾಡಗೌಡ, ರವೀಂದ್ರ ಲೋಣಿ, ಎಂ.ಬಿ.ಅಂಗಡಿ, ಎಂ.ಎಸ್.ಪಾಟೀಲ, ಸುಮಂಗಲಾ ಕೋಟಿ, ಕೆ.ವಾಯ್.ಬಿರಾದಾರ, ಮಹದೇವಯ್ಯ ಶಾಸ್ತ್ರೀಗಳು, ಪುರಸಭೆ ಸದಸ್ಯೆ ಸಹನಾ ಬಡಿಗೇರ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ನಡಹಳ್ಳಿಯವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಕಾರ್ಯಕರ್ತರು ರಕ್ತದಾನ ಶಿಬಿರ,ಆರೋಗ್ಯತಪಾಸಣಾ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿದರು.

ಸಚಿವ ಎಂ.ಬಿ.ಪಾಟೀಲ್‌ರಿಗೆ ಟಾಂಗ್: ನೀರಾವರಿ ಭಗೀರಥ ಎಂದು ಕರೆಯಿಸಿಕೊಳ್ಳುವ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ಮತಕ್ಷೇತ್ರದಲ್ಲಿ ರಸ್ತೆಗಳ ಸ್ಥಿತಿ ಹೇಳುವಂತಿಲ್ಲ. ಬಬಲೇಶ್ವರ, ಸಿಂದಗಿ, ನಾಗಠಾಣ ಕ್ಷೇತ್ರದ ಒಳಗಡೆ ಹೋಗಿ ಹೊರಬರಲು ಆಗುವುದಿಲ್ಲ ಎಂದು ಮಾಜಿ ಶಾಸಕ ನಡಹಳ್ಳಿ ಟೀಕಿಸಿದರು.

ಕನಸು : ಮುದ್ದೇಬಿಹಾಳ ಮತಕ್ಷೇತ್ರದಂತಹ ಸಂಪನ್ಮೂಲ ಹೊಂದಿರುವ ತಾಲ್ಲೂಕು ರಾಜ್ಯದಲ್ಲಿ ಬೇರಾವುದು ಇಲ್ಲ. ಇಲ್ಲಿ 48 ಕೆರೆ ಇರುವ ಎರಡು ಡ್ಯಾಮ್‌ಗಳನ್ನು ಹೊಂದಿಕೊಂಡಿರುವ ತಾಲ್ಲೂಕು ಮುದ್ದೇಬಿಹಾಳ ಆಗಿದೆ. ಕನಸು ಹೊತ್ತಿರುವ ನಾಯಕರನ್ನು ನೀವು ಆಯ್ಕೆ ಮಾಡಿಕೊಳ್ಳಿ. ಹತ್ತು ಕೋಟಿ ವಚ್ಚದಲ್ಲಿ ಹೈನುಗಾರಿಕೆ ತರಬೇತಿ ಕೇಂದ್ರ ಮಾಡುತ್ತೇನೆ. ನಮ್ಮ ರೈತರು ಭೂಮಿಗೆ ಏನು ಬೇಕು ಎಂಬುದನ್ನು ತಿಳಿದುಕೊಂಡು ಒಕ್ಕಲುತನ ಮಾಡಬೇಕು.ರೈತನ ಬದುಕು ಹಸನು ಮಾಡಬೇಕು ಎಂಬುದು ನನ್ನ ಕನಸು ಎಂದು ಮಾಜಿ ಶಾಸಕ ನಡಹಳ್ಳಿ ಹೇಳಿದರು.

ನಾಡಗೌಡ, ಭೈರೇಗೌಡರ ವಿರುದ್ಧವೂ ವಾಗ್ದಾಳಿ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಅಭಿವೃದ್ಧಿಪಡಿಸಲು ಆಲಮಟ್ಟಿ ಜಲಾಶಯ ಎತ್ತರಿಸಿದರೆ ರೈತರಿಗೆ ಭೂಸ್ವಾಧೀನಗೊಂಡ ಜಮೀನುಗಳಿಗೆ ಪರಿಹಾರ ಕೊಡುವುದು ಹೆಚ್ಚುವರಿ ನಷ್ಟವೆಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಎಲ್ಲೋ ಕೂತುಕೊಂಡು ಭಾಷಣ ಮಾಡುತ್ತಾನೆ. ಭೈರೇಗೌಡ ಅವನೇನು ಅವರ ಅಪ್ಪನ ಮನೆಯಿಂದ ರೈತರಿಗೆ ಪರಿಹಾರ ಕೊಡುತ್ತಾನಾ?. ನಮ್ಮ ರೈತರ ಜಮೀನುಗಳು ಕಳೆದುಕೊಂಡಿರುತ್ತಾರೆ.ಅವರಿಗೆ ಪರಿಹಾರ ಸಿಗಬೇಕು ಎಂದು ನಡಹಳ್ಳಿ ಭೈರೇಗೌಡ ವಿರುದ್ದ ವಾಗ್ದಾಳಿ ನಡೆಸಿದರು.

ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಈಗ ಆಯ್ಕೆಯಾದವರು ಒಂದೇ ಒಂದು ಪಂಚಾಯಿತಿಗೆ ಹನ್ನೆರಡು ತಾಸು ಕರೆಂಟ್ ಕೊಡಲು ಆಗುತ್ತದೆಯೇ? ಎಂಬುದನ್ನು ತೋರಿಸಿಕೊಡಲಿ ಎಂದು ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ, ನಾನು ಇಡೀ ತಾಲ್ಲೂಕಿಗೆ 12 ತಾಸು ವಿದ್ಯುತ್ ಕೊಡುತ್ತೇನೆ.

ನನ್ನ ಅವಧಿಯಲ್ಲಿ ಹತ್ತು ವಿದ್ಯುತ್ ಸ್ಟೇಷನ್ ತಂದಿದ್ದೇವೆ. ಆಗ ಏಳು ತಾಸು ಕೊಡುತ್ತಿದ್ದರು. ಈಗಲೂ ಅಷ್ಟೇ ವಿದ್ಯುತ್ ಕೊಡುತ್ತಿದ್ದಾರೆ. ಇವರಿಂದ ಎರಡೂವರೆ ವರ್ಷದಲ್ಲಿ ಹೆಚ್ಚಿಗೆ ವಿದ್ಯುತ್ ಕೊಡುವುದಕ್ಕೆ ಆಗಿಲ್ಲ ಎಂದು ಶಾಸಕ ನಾಡಗೌಡರ ಹೆಸರು ಹೇಳದೇ ಟೀಕಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ