I will give 10 thousand jobs before going to soil: Nadahalli

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ

ಮುದ್ದೇಬಿಹಾಳ : ನಾನು ಮತಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಜನ ಬೆಂಬಲಿಸಲಿಲ್ಲವೋ ಏನೋ ಆದರೆ ರೈತರ ಮಕ್ಕಳು ಕಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ನಾನು ಮಣ್ಣಿಗೆ ಹೋಗುವ ಮುನ್ನ 10 ಸಾವಿರ ಉದ್ಯೋಗ ಕೊಟ್ಟು ಹೋಗುತ್ತೇನೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಭಾವುಕರಾಗಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ತಮ್ಮ ಫಾರ್ಮಹೌಸ್‌ನಲ್ಲಿ ಮಂಗಳವಾರ ಅಭಿಮಾನಿಗಳು, ಕಾರ್ಯಕರ್ತರು ಹಮ್ಮಿಕೊಂಡಿದ್ದ ತಮ್ಮ 56ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವೆಲ್ಲ ಜಾತಿ ವಿಷಯ ಬಂದಾಗ ಒಗ್ಗಟ್ಟು ಆಗುತ್ತೇವೆ. ಆದರೆ ಜನರ ಬದುಕು ಕಟ್ಟುವ ನಾಯಕತ್ವವನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಎಡವಿದ್ದೇವೆ. ಆಧುನಿಕ ಬದುಕು ಕಟ್ಟಿಕೊಡುವ, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಾಯಕತ್ವ ಬೇಕು. ತೊಗರಿ ಬೆಳೆ ನಷ್ಟವಾದರೂ ಈ ಸರ್ಕಾರದಿಂದ ಒಂದು ರುಪಾಯಿ ಪರಿಹಾರ ಬಂದಿಲ್ಲ. ಬರುವುದೂ ಇಲ್ಲ. ಈ ಸರ್ಕಾರ,ಈಗ ನೀವು ಆಯ್ಕೆಮಾಡಿಕೊಂಡ ಜನಪ್ರತಿನಿಧಿ ಹಾಗೆ ಇದ್ದಾರೆ. ರೈತರು ಬೆಳೆ ಇನ್ಸೂರೆನ್ಸ್ ಬಂದಿಲ್ಲ ಎಂದು ಕೇಳುತ್ತಿದ್ದಾರೆ. ಅವರಿಗೆಲ್ಲ ಈಗ ನೀವು ಬಾಯಿ ಬಡಿದುಕೊಳ್ಳಿ ಎಂದೇ ಹೇಳಿದ್ದೇನೆ ಎಂದು ತಿಳಿಸಿದರು.

ನೀರಾವರಿ ಯೋಜನೆಗಳು ಅಲ್ಲಿಗೆ ನಿಂತಿವೆ. ನಾಗರಬೆಟ್ಟ ಏತ ನೀರಾವರಿ ಯೋಜನೆ ಏನಾಗಿದೆ. ಬೂದಿಹಾಳ ಪೀರಾಪೂರ ಯೋಜನೆಗಾಗಿ ರೈತರು ಹೋರಾಟ ನಡೆಸುವಾಗ ನಾನು ಹೋರಾಟಕ್ಕೆ ಬೆಂಬಲಿಸುವುದಾಗಿ ಹೇಳುತ್ತಲೇ ಉಸ್ತುವಾರಿ ಸಚಿವರು ಓಡಿ ಬಂದು ಭರವಸೆ ಕೊಟ್ಟು ಹೋದರು. ನೀರಾವರಿಗಾಗಿ ಹೋರಾಟ ಅನಿವಾರ್ಯ ಎಂಬಂತಾಗಿದೆ ಎಂದರು.

ಮತಕ್ಷೇತ್ರದಲ್ಲಿ ಕುಡಿವ ನೀರಿನ ಯೋಜನೆ ಸಲುವಾಗಿ ಸಿಸಿ ರಸ್ತೆ ಹಾಳುಮಾಡುತ್ತಿದ್ದಾರೆ. ಆಯ್ಕೆಯಾದವರು ನಿಮ್ಮೂರಿಗೆ ಬಂದು ಧನ್ಯವಾದ ಕೂಡಾ ಹೇಳಲಿಲ್ಲ. ಮೊದಲು ಅವರಿಗೆ ಹಳ್ಳಿಗಳ ಜನಕ್ಕೆ ನೀರು ಕೊಡಲು ತಿಳಿಸಿ. ನನ್ನ ದುಡಿಮೆಯಲ್ಲಿ ಅರ್ಧ ರಾಜಕಾರಣಕ್ಕೆ, ದಾಸೋಹ ಕ್ಕೆ ವ್ಯಯ ಮಾಡಿದ್ದೇನೆ. ನನಗೆ ಮಂತ್ರಿಯಾಗಿ ಮೆರೆಯಬೇಕು ಎಂಬ ಭಾವನೆ ಇಲ್ಲ. ರೈತರ ಮಕ್ಕಳು ತಮ್ಮ ತಂದೆಯವರು ಅನುಭವಿಸಿದ ಕಷ್ಟ ಅನುಭವಿಸಬಾರದು ಎಂಬ ಕಾರಣದಿಂದ ರಾಜಕಾರಣಕ್ಕೆ ಬಂದಿದ್ದೇನೆ. ಇದು ಕೇವಲ ಭಾಷಣಕ್ಕಾಗಿ ಮಾತಲ್ಲ ಸಂಕಲ್ಪದಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿದರು. ಬಿಜೆಪಿ ಮುಖಂಡರಾದ ರಮೇಶ ಬಿದನೂರ, ರವಿಕಾಂತ ಬಗಲಿ, ಪ್ರಭುಗೌಡ ಬಿರಾದಾರ, ಪ್ರಭು ಕಡಿ, ಬಿ.ಪಿ.ಕುಲಕರ್ಣಿ, ಮಲಕೇಂದ್ರಗೌಡ ಪಾಟೀಲ, ಗಂಗಾಧರ ನಾಡಗೌಡ, ರವೀಂದ್ರ ಲೋಣಿ, ಎಂ.ಬಿ.ಅಂಗಡಿ, ಎಂ.ಎಸ್.ಪಾಟೀಲ, ಸುಮಂಗಲಾ ಕೋಟಿ, ಕೆ.ವಾಯ್.ಬಿರಾದಾರ, ಮಹದೇವಯ್ಯ ಶಾಸ್ತ್ರೀಗಳು, ಪುರಸಭೆ ಸದಸ್ಯೆ ಸಹನಾ ಬಡಿಗೇರ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ನಡಹಳ್ಳಿಯವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಕಾರ್ಯಕರ್ತರು ರಕ್ತದಾನ ಶಿಬಿರ,ಆರೋಗ್ಯತಪಾಸಣಾ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿದರು.

ಸಚಿವ ಎಂ.ಬಿ.ಪಾಟೀಲ್‌ರಿಗೆ ಟಾಂಗ್: ನೀರಾವರಿ ಭಗೀರಥ ಎಂದು ಕರೆಯಿಸಿಕೊಳ್ಳುವ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ಮತಕ್ಷೇತ್ರದಲ್ಲಿ ರಸ್ತೆಗಳ ಸ್ಥಿತಿ ಹೇಳುವಂತಿಲ್ಲ. ಬಬಲೇಶ್ವರ, ಸಿಂದಗಿ, ನಾಗಠಾಣ ಕ್ಷೇತ್ರದ ಒಳಗಡೆ ಹೋಗಿ ಹೊರಬರಲು ಆಗುವುದಿಲ್ಲ ಎಂದು ಮಾಜಿ ಶಾಸಕ ನಡಹಳ್ಳಿ ಟೀಕಿಸಿದರು.

ಕನಸು : ಮುದ್ದೇಬಿಹಾಳ ಮತಕ್ಷೇತ್ರದಂತಹ ಸಂಪನ್ಮೂಲ ಹೊಂದಿರುವ ತಾಲ್ಲೂಕು ರಾಜ್ಯದಲ್ಲಿ ಬೇರಾವುದು ಇಲ್ಲ. ಇಲ್ಲಿ 48 ಕೆರೆ ಇರುವ ಎರಡು ಡ್ಯಾಮ್‌ಗಳನ್ನು ಹೊಂದಿಕೊಂಡಿರುವ ತಾಲ್ಲೂಕು ಮುದ್ದೇಬಿಹಾಳ ಆಗಿದೆ. ಕನಸು ಹೊತ್ತಿರುವ ನಾಯಕರನ್ನು ನೀವು ಆಯ್ಕೆ ಮಾಡಿಕೊಳ್ಳಿ. ಹತ್ತು ಕೋಟಿ ವಚ್ಚದಲ್ಲಿ ಹೈನುಗಾರಿಕೆ ತರಬೇತಿ ಕೇಂದ್ರ ಮಾಡುತ್ತೇನೆ. ನಮ್ಮ ರೈತರು ಭೂಮಿಗೆ ಏನು ಬೇಕು ಎಂಬುದನ್ನು ತಿಳಿದುಕೊಂಡು ಒಕ್ಕಲುತನ ಮಾಡಬೇಕು.ರೈತನ ಬದುಕು ಹಸನು ಮಾಡಬೇಕು ಎಂಬುದು ನನ್ನ ಕನಸು ಎಂದು ಮಾಜಿ ಶಾಸಕ ನಡಹಳ್ಳಿ ಹೇಳಿದರು.

ನಾಡಗೌಡ, ಭೈರೇಗೌಡರ ವಿರುದ್ಧವೂ ವಾಗ್ದಾಳಿ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಅಭಿವೃದ್ಧಿಪಡಿಸಲು ಆಲಮಟ್ಟಿ ಜಲಾಶಯ ಎತ್ತರಿಸಿದರೆ ರೈತರಿಗೆ ಭೂಸ್ವಾಧೀನಗೊಂಡ ಜಮೀನುಗಳಿಗೆ ಪರಿಹಾರ ಕೊಡುವುದು ಹೆಚ್ಚುವರಿ ನಷ್ಟವೆಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಎಲ್ಲೋ ಕೂತುಕೊಂಡು ಭಾಷಣ ಮಾಡುತ್ತಾನೆ. ಭೈರೇಗೌಡ ಅವನೇನು ಅವರ ಅಪ್ಪನ ಮನೆಯಿಂದ ರೈತರಿಗೆ ಪರಿಹಾರ ಕೊಡುತ್ತಾನಾ?. ನಮ್ಮ ರೈತರ ಜಮೀನುಗಳು ಕಳೆದುಕೊಂಡಿರುತ್ತಾರೆ.ಅವರಿಗೆ ಪರಿಹಾರ ಸಿಗಬೇಕು ಎಂದು ನಡಹಳ್ಳಿ ಭೈರೇಗೌಡ ವಿರುದ್ದ ವಾಗ್ದಾಳಿ ನಡೆಸಿದರು.

ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಈಗ ಆಯ್ಕೆಯಾದವರು ಒಂದೇ ಒಂದು ಪಂಚಾಯಿತಿಗೆ ಹನ್ನೆರಡು ತಾಸು ಕರೆಂಟ್ ಕೊಡಲು ಆಗುತ್ತದೆಯೇ? ಎಂಬುದನ್ನು ತೋರಿಸಿಕೊಡಲಿ ಎಂದು ಸವಾಲು ಹಾಕಿದ ಮಾಜಿ ಶಾಸಕ ನಡಹಳ್ಳಿ, ನಾನು ಇಡೀ ತಾಲ್ಲೂಕಿಗೆ 12 ತಾಸು ವಿದ್ಯುತ್ ಕೊಡುತ್ತೇನೆ.

ನನ್ನ ಅವಧಿಯಲ್ಲಿ ಹತ್ತು ವಿದ್ಯುತ್ ಸ್ಟೇಷನ್ ತಂದಿದ್ದೇವೆ. ಆಗ ಏಳು ತಾಸು ಕೊಡುತ್ತಿದ್ದರು. ಈಗಲೂ ಅಷ್ಟೇ ವಿದ್ಯುತ್ ಕೊಡುತ್ತಿದ್ದಾರೆ. ಇವರಿಂದ ಎರಡೂವರೆ ವರ್ಷದಲ್ಲಿ ಹೆಚ್ಚಿಗೆ ವಿದ್ಯುತ್ ಕೊಡುವುದಕ್ಕೆ ಆಗಿಲ್ಲ ಎಂದು ಶಾಸಕ ನಾಡಗೌಡರ ಹೆಸರು ಹೇಳದೇ ಟೀಕಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು