If journalists are not united, politicians will ride: K. Shivakumar

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು.

ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪತ್ರಕರ್ತರಾದವರು ಸಮಾಜದಲ್ಲಿ ಒಗ್ಗಟ್ಟಿನಿಂದ ಇದ್ದರೆ ಗೌರವ ಸಿಗಲಿದೆ ಹೇಳಿದ ಕೆ. ಶಿವಕುಮಾರ್, ಪತ್ರಕರ್ತರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೆಲ ಅಧಿಕಾರಿ ವರ್ಗ ಕಡಿವಾಣ ಹಾಕಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಮಾನ್ಯತೆ ಪಡೆದ ಪತ್ರಕರ್ತರಿಗೆ ಬಸ್ ಪಾಸ್, ಆರೋಗ್ಯ ಸಂಜೀವಿನಿ ಮತ್ತು ಮಾಸಾಸನ ನೀಡಲು ಮುಂದಾಗಿದೆ. ಆದರೆ, ಕೆಲ ಅಧಿಕಾರಿಗಳು ಸರ್ಕಾರದ ಪತ್ರಕರ್ತರಿಗೆ ಸಿದ್ದಪಡಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಠಿಣ ಷರತ್ತುಗಳನ್ನು ವಿಧಿಸಿ ಕಡಿವಾಣ ಹಾಕುತ್ತಿದ್ದಾರೆ. ಇದು ಯಾವ ನ್ಯಾಯ, ಲಕ್ಷಾಂತರ ರು. ಸಂಬಳ ತೆಗೆದುಕೊಳ್ಳುವ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಪಿಂಚಣಿ ಬೇಕು. ಆದರೆ ಪತ್ರಕರ್ತರು 40 ಸಾವಿರ ಸಂಬಳ ಮೀರಿರುವವರಿಗೆ ಪಿಂಚಣೆ ಕೊಡಲ್ಲ ಎಂದಿದ್ದಾರೆ. ಪತಕರ್ತರು 20, 30, 10 ಸಾವಿರ ಸಂಬಳದಲ್ಲೇ ದುಡಿಯಬೇಕಾ ? ಎಂದು ಖಾರವಾಗಿ ಪ್ರಶ್ನಿಸಿ, ಅಧಿಕಾರಿಗಳ ಇಂತಹ ತಾರತಮ್ಯದ ಬಗ್ಗೆ ಮುಂದಿನ ಅಧಿವೇಶದಲ್ಲೇ ಚರ್ಚಿಸುವೆ. ವಾರ್ತಾ ಖಾತೆ ಹೊಂದಿರುವ ಮುಖ್ಯಮಂತಿಗಳ ಗಮನಕ್ಕೆ ತಂದು ಪತ್ರಕರ್ತರಿಗೆ ನ್ಯಾಯ ಒದಗಿಸುವ ದೃಷ್ಟಿಯಲ್ಲಿ ಕೆಲಸ ಮಾಡುವೆ ಎಂದರು.

ವಾರ್ತಾ ಇಲಾಖೆಯ ಹೊಸ ಜಾಹೀರಾತು ನೀತಿ ಬಗ್ಗೆ ತಾನು ಎನ್‌ಸಿ, ಎಸ್‌ಟಿ, ಓಬಿಸಿ ಪತ್ರಿಕೆಗಳಿಗೆ ಹೆಚ್ಚುವರಿ ಜಾಹೀರಾತು ಕೊಡಬೇಕು ಎಂದು ಹೇಳಿದ್ದೇನೆ. ಎಲ್ಲ ಪತ್ರಿಕೆಗಳಿಗೂ ಜಾಹೀರಾತು ಕೊಡಬೇಕು. ಜಾಹೀರಾತು ಇಲ್ಲದೆ ಪತ್ರಿಕೆಗಳನ್ನು ನಡೆಸು ವುದು ಕಷ್ಟ ಪತ್ರಕರ್ತರಿಗೂ ನ್ಯಾಯಯುತ ವೇತನ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಸದಸ್ಯನಾಗಿದ್ದಾಗ ಚಾಮರಾಜನಗರ ಜಿಲ್ಲೆಯಿಂದ ಅರ್ಜಿ ಹಾಕದವರಿಗೂ ಪ್ರಶಸ್ತಿ ಕೊಡಿಸಿದೆ. ಕಳೆದ ಐದಾರು ವರ್ಷಗಳಿಂದ ಜಿಲ್ಲೆಗೆ ಪ್ರಶಸ್ತಿ ಸಿಕ್ಕಿಲ್ಲ ಮುಂದಿನ ಸಲ ಕೊಡಿಸಲಾಗುವುದು ಎಂದು ಹೇಳಿದ ಕೆ.ಶಿವಕುಮಾರ್, ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವುದು ಒಳ್ಳೆಯದು ಅದಕ್ಕೆ ತಾನು ವೈಯುಕ್ತಿಕವಾಗಿ 25 ಸಾವಿರ ರೂಪಾಯಿಗಳನ್ನು ಕೊಡುತ್ತೇನೆ . ಪತ್ರಕರ್ತರು ಮತ್ತು ಕುಟುಂಬಕ್ಕೆ ಆರೋಗ್ಯ ಭದ್ರತೆ ಇರಬೇಕು. ಎಲ್ಲ ಪತ್ರಕರ್ತರು ವಿಮೆ ಮಾಡಿಸಿ ಕೊಳ್ಳಬೇಕು. ಅನಾರೋಗ್ಯದಿಂದ ಬಳಲಿ ಚಿಕಿತ್ಸಾ ವೆಚ್ಚ 3 ಲಕ್ಷ ರೂಪಾಯಿಗಳಿಗೂ ಬಂದರೆ ನನಗೆ ತಿಳಿಸಿದರೆ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ಭರಿಸಿಕೊಡುವುದಾಗಿ ಭರವಸೆ ನೀಡಿದರು.

ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಾಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಪತ್ರಿಕಾರಂಗ ಸಮಾಜ, ಸರ್ಕಾರವನ್ನು ಕಣ್ಣೆರೆಸುವ ಕೆಲಸ ಮಾಡುತ್ತದೆ. ಪತ್ರಿಕಾರಂಗವು ಸಂವಿಧಾನದ 4ನೇ ಅಂಗವಾಗಿದೆ. ಪತ್ರಿಕಾ ರಂಗವು ಕಣ್ಣಿಗೆ ಕಾಣದ ಅಸ್ತ್ರವಾಗಿದ್ದು ಒಳ್ಳೆಯದು ಹಾಗೂ ಕೆಟ್ಟದ್ದನ್ನು ನೇರವಾಗಿ ಗುರ್ತಿ ಸುವ ಅಂಗವಾಗಿದೆ. ಟಿವಿ ಮಾಧ್ಯಮಗಳಲ್ಲಿ ತಪ್ಪು ಸುದ್ದಿಗಳು ಬಂದರೂ ಪತ್ರಿಕೆಗಳಲ್ಲಿ ನೇರವಾಗಿ ಬರುತ್ತದೆ ಎಂದರು.

ಕನ್ನಡಪ್ರಭ ಪತ್ರಿಕೆ ಮೈಸೂರು ಆವೃತ್ತಿಯ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನಕುಮಾರ್, ಶಾಸಕ ಗಣೇಶ್ ಪ್ರಸಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆರಗೋಡು ಸೋಮಶೇಖರ್ ಟೆಲೆಕ್ ರವಿಕುಮಾರ್‌ಮಾತನಾಡಿದರು.

ಇದೇ ಸಂದರ್ಭದಲ್ಲಿ ಕನ್ನಡಪ್ರಭ ಪತ್ರಿಕೆ ಮೈಸೂರು ಆವೃತ್ತಿಯ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನಕುಮಾರ್ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್, ರವರನ್ನು ಸನ್ಮಾನಿಸಲಾಯಿತು.

2025-28 ನೇ ಸಾಲಿನ ಚಾಮರಾಜನಗರ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಅರ್.ಎನ್.ಸಿದ್ದಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಸಂಘದ ನಿಕಟಪೂರ್ವ ಅಧ್ಯಕ್ಷ ದೇವರಾಜ ಕಪ್ಪಸೋಗೆ, ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ