If journalists are not united, politicians will ride: K. Shivakumar

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು.

ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪತ್ರಕರ್ತರಾದವರು ಸಮಾಜದಲ್ಲಿ ಒಗ್ಗಟ್ಟಿನಿಂದ ಇದ್ದರೆ ಗೌರವ ಸಿಗಲಿದೆ ಹೇಳಿದ ಕೆ. ಶಿವಕುಮಾರ್, ಪತ್ರಕರ್ತರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೆಲ ಅಧಿಕಾರಿ ವರ್ಗ ಕಡಿವಾಣ ಹಾಕಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಮಾನ್ಯತೆ ಪಡೆದ ಪತ್ರಕರ್ತರಿಗೆ ಬಸ್ ಪಾಸ್, ಆರೋಗ್ಯ ಸಂಜೀವಿನಿ ಮತ್ತು ಮಾಸಾಸನ ನೀಡಲು ಮುಂದಾಗಿದೆ. ಆದರೆ, ಕೆಲ ಅಧಿಕಾರಿಗಳು ಸರ್ಕಾರದ ಪತ್ರಕರ್ತರಿಗೆ ಸಿದ್ದಪಡಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಠಿಣ ಷರತ್ತುಗಳನ್ನು ವಿಧಿಸಿ ಕಡಿವಾಣ ಹಾಕುತ್ತಿದ್ದಾರೆ. ಇದು ಯಾವ ನ್ಯಾಯ, ಲಕ್ಷಾಂತರ ರು. ಸಂಬಳ ತೆಗೆದುಕೊಳ್ಳುವ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಪಿಂಚಣಿ ಬೇಕು. ಆದರೆ ಪತ್ರಕರ್ತರು 40 ಸಾವಿರ ಸಂಬಳ ಮೀರಿರುವವರಿಗೆ ಪಿಂಚಣೆ ಕೊಡಲ್ಲ ಎಂದಿದ್ದಾರೆ. ಪತಕರ್ತರು 20, 30, 10 ಸಾವಿರ ಸಂಬಳದಲ್ಲೇ ದುಡಿಯಬೇಕಾ ? ಎಂದು ಖಾರವಾಗಿ ಪ್ರಶ್ನಿಸಿ, ಅಧಿಕಾರಿಗಳ ಇಂತಹ ತಾರತಮ್ಯದ ಬಗ್ಗೆ ಮುಂದಿನ ಅಧಿವೇಶದಲ್ಲೇ ಚರ್ಚಿಸುವೆ. ವಾರ್ತಾ ಖಾತೆ ಹೊಂದಿರುವ ಮುಖ್ಯಮಂತಿಗಳ ಗಮನಕ್ಕೆ ತಂದು ಪತ್ರಕರ್ತರಿಗೆ ನ್ಯಾಯ ಒದಗಿಸುವ ದೃಷ್ಟಿಯಲ್ಲಿ ಕೆಲಸ ಮಾಡುವೆ ಎಂದರು.

ವಾರ್ತಾ ಇಲಾಖೆಯ ಹೊಸ ಜಾಹೀರಾತು ನೀತಿ ಬಗ್ಗೆ ತಾನು ಎನ್‌ಸಿ, ಎಸ್‌ಟಿ, ಓಬಿಸಿ ಪತ್ರಿಕೆಗಳಿಗೆ ಹೆಚ್ಚುವರಿ ಜಾಹೀರಾತು ಕೊಡಬೇಕು ಎಂದು ಹೇಳಿದ್ದೇನೆ. ಎಲ್ಲ ಪತ್ರಿಕೆಗಳಿಗೂ ಜಾಹೀರಾತು ಕೊಡಬೇಕು. ಜಾಹೀರಾತು ಇಲ್ಲದೆ ಪತ್ರಿಕೆಗಳನ್ನು ನಡೆಸು ವುದು ಕಷ್ಟ ಪತ್ರಕರ್ತರಿಗೂ ನ್ಯಾಯಯುತ ವೇತನ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಸದಸ್ಯನಾಗಿದ್ದಾಗ ಚಾಮರಾಜನಗರ ಜಿಲ್ಲೆಯಿಂದ ಅರ್ಜಿ ಹಾಕದವರಿಗೂ ಪ್ರಶಸ್ತಿ ಕೊಡಿಸಿದೆ. ಕಳೆದ ಐದಾರು ವರ್ಷಗಳಿಂದ ಜಿಲ್ಲೆಗೆ ಪ್ರಶಸ್ತಿ ಸಿಕ್ಕಿಲ್ಲ ಮುಂದಿನ ಸಲ ಕೊಡಿಸಲಾಗುವುದು ಎಂದು ಹೇಳಿದ ಕೆ.ಶಿವಕುಮಾರ್, ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವುದು ಒಳ್ಳೆಯದು ಅದಕ್ಕೆ ತಾನು ವೈಯುಕ್ತಿಕವಾಗಿ 25 ಸಾವಿರ ರೂಪಾಯಿಗಳನ್ನು ಕೊಡುತ್ತೇನೆ . ಪತ್ರಕರ್ತರು ಮತ್ತು ಕುಟುಂಬಕ್ಕೆ ಆರೋಗ್ಯ ಭದ್ರತೆ ಇರಬೇಕು. ಎಲ್ಲ ಪತ್ರಕರ್ತರು ವಿಮೆ ಮಾಡಿಸಿ ಕೊಳ್ಳಬೇಕು. ಅನಾರೋಗ್ಯದಿಂದ ಬಳಲಿ ಚಿಕಿತ್ಸಾ ವೆಚ್ಚ 3 ಲಕ್ಷ ರೂಪಾಯಿಗಳಿಗೂ ಬಂದರೆ ನನಗೆ ತಿಳಿಸಿದರೆ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ಭರಿಸಿಕೊಡುವುದಾಗಿ ಭರವಸೆ ನೀಡಿದರು.

ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಾಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಪತ್ರಿಕಾರಂಗ ಸಮಾಜ, ಸರ್ಕಾರವನ್ನು ಕಣ್ಣೆರೆಸುವ ಕೆಲಸ ಮಾಡುತ್ತದೆ. ಪತ್ರಿಕಾರಂಗವು ಸಂವಿಧಾನದ 4ನೇ ಅಂಗವಾಗಿದೆ. ಪತ್ರಿಕಾ ರಂಗವು ಕಣ್ಣಿಗೆ ಕಾಣದ ಅಸ್ತ್ರವಾಗಿದ್ದು ಒಳ್ಳೆಯದು ಹಾಗೂ ಕೆಟ್ಟದ್ದನ್ನು ನೇರವಾಗಿ ಗುರ್ತಿ ಸುವ ಅಂಗವಾಗಿದೆ. ಟಿವಿ ಮಾಧ್ಯಮಗಳಲ್ಲಿ ತಪ್ಪು ಸುದ್ದಿಗಳು ಬಂದರೂ ಪತ್ರಿಕೆಗಳಲ್ಲಿ ನೇರವಾಗಿ ಬರುತ್ತದೆ ಎಂದರು.

ಕನ್ನಡಪ್ರಭ ಪತ್ರಿಕೆ ಮೈಸೂರು ಆವೃತ್ತಿಯ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನಕುಮಾರ್, ಶಾಸಕ ಗಣೇಶ್ ಪ್ರಸಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆರಗೋಡು ಸೋಮಶೇಖರ್ ಟೆಲೆಕ್ ರವಿಕುಮಾರ್‌ಮಾತನಾಡಿದರು.

ಇದೇ ಸಂದರ್ಭದಲ್ಲಿ ಕನ್ನಡಪ್ರಭ ಪತ್ರಿಕೆ ಮೈಸೂರು ಆವೃತ್ತಿಯ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನಕುಮಾರ್ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್, ರವರನ್ನು ಸನ್ಮಾನಿಸಲಾಯಿತು.

2025-28 ನೇ ಸಾಲಿನ ಚಾಮರಾಜನಗರ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಅರ್.ಎನ್.ಸಿದ್ದಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಸಂಘದ ನಿಕಟಪೂರ್ವ ಅಧ್ಯಕ್ಷ ದೇವರಾಜ ಕಪ್ಪಸೋಗೆ, ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ